<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಸಂಬಂಧ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿ ಅಂಗೀಕರಿಸುವ ಕುರಿತು ಮಂಗಳವಾರ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದ ವೇಳೆ ವಿಧಾನಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<p>ವಿಧಾನ ಮಂಡಲದ ದಿನದ ಕಲಾಪ ಮುಗಿಯುತ್ತಿದ್ದಂತೆ ರಾತ್ರಿ 7ರ ಬಳಿಕ ವಿಧಾನಸೌಧಕ್ಕೆ ಸಾರ್ವಜನಿಕರು ಹಾಗೂ ಪತ್ರಕರ್ತರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೂ ಕೆಲವು ಸಂಘಟನೆಗಳ ಮುಖಂಡರು ರಾಜಕೀಯ ನಾಯಕರ ಹೆಸರು ಹೇಳಿ, ವಿಧಾನಸೌಧ ಪ್ರವೇಶಿಸಿದರು. ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಕಾದಿದ್ದರು. </p>.<p>ಸಭೆಯ ತೀರ್ಮಾನ ಪ್ರಕಟಿಸುತ್ತಿದ್ದಂತೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಡಗೈ ಸಮುದಾಯದವರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸರ್ಕಾರದ ಪರ ಜಯಘೋಷ ಮೊಳಗಿದವು.</p>.<p>ವರದಿ ಶಿಫಾರಸುಗಳ ಜಾರಿ ಕುರಿತು ಒಂದು ತಿಂಗಳಿನಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಲವು ಸಂಘಟನೆಗಳು ಪರ–ವಿರೋಧ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು.</p>.<p>ವರದಿಯ ಪರವಾಗಿದ್ದ ಸಂಘಟನೆಗಳು ತಕ್ಷಣ ವರದಿಯನ್ನು ಅಂಗೀಕರಿಸಿ, ಶಿಫಾರಸುಗಳನ್ನು ಜಾರಿ ಮಾಡಬೇಕೆಂದು ಪಟ್ಟು ಹಿಡಿದಿದ್ದವು. ಮತ್ತೊಂದೆಡೆ ವರದಿಗೆ ವಿರೋಧ ವ್ಯಕ್ತಪಡಿಸಿದ್ದ ಸಂಘಟನೆಗಳು, ವರದಿಯಲ್ಲಿ ಹಲವು ಲೋಪದೋಷಗಳಿದ್ದು, ಪರಿಷ್ಕರಿಸಿ ಇಲ್ಲವೇ ತಿರಸ್ಕರಿಸಬೇಕು ಎಂದು ಆಗ್ರಹಿಸಿದ್ದವು.</p>.<p>ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಫ್ರೀಡಂ ಪಾರ್ಕ್ನಲ್ಲಿ ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಮಂಗಳವಾರ ವ್ಯಕ್ತಿಯೊಬ್ಬ ಪೆಟ್ರೋಲ್ ಹಿಡಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ತಡೆದು, ಕರೆದೊಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಸಂಬಂಧ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿ ಅಂಗೀಕರಿಸುವ ಕುರಿತು ಮಂಗಳವಾರ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದ ವೇಳೆ ವಿಧಾನಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<p>ವಿಧಾನ ಮಂಡಲದ ದಿನದ ಕಲಾಪ ಮುಗಿಯುತ್ತಿದ್ದಂತೆ ರಾತ್ರಿ 7ರ ಬಳಿಕ ವಿಧಾನಸೌಧಕ್ಕೆ ಸಾರ್ವಜನಿಕರು ಹಾಗೂ ಪತ್ರಕರ್ತರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೂ ಕೆಲವು ಸಂಘಟನೆಗಳ ಮುಖಂಡರು ರಾಜಕೀಯ ನಾಯಕರ ಹೆಸರು ಹೇಳಿ, ವಿಧಾನಸೌಧ ಪ್ರವೇಶಿಸಿದರು. ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಕಾದಿದ್ದರು. </p>.<p>ಸಭೆಯ ತೀರ್ಮಾನ ಪ್ರಕಟಿಸುತ್ತಿದ್ದಂತೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಡಗೈ ಸಮುದಾಯದವರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸರ್ಕಾರದ ಪರ ಜಯಘೋಷ ಮೊಳಗಿದವು.</p>.<p>ವರದಿ ಶಿಫಾರಸುಗಳ ಜಾರಿ ಕುರಿತು ಒಂದು ತಿಂಗಳಿನಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಲವು ಸಂಘಟನೆಗಳು ಪರ–ವಿರೋಧ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು.</p>.<p>ವರದಿಯ ಪರವಾಗಿದ್ದ ಸಂಘಟನೆಗಳು ತಕ್ಷಣ ವರದಿಯನ್ನು ಅಂಗೀಕರಿಸಿ, ಶಿಫಾರಸುಗಳನ್ನು ಜಾರಿ ಮಾಡಬೇಕೆಂದು ಪಟ್ಟು ಹಿಡಿದಿದ್ದವು. ಮತ್ತೊಂದೆಡೆ ವರದಿಗೆ ವಿರೋಧ ವ್ಯಕ್ತಪಡಿಸಿದ್ದ ಸಂಘಟನೆಗಳು, ವರದಿಯಲ್ಲಿ ಹಲವು ಲೋಪದೋಷಗಳಿದ್ದು, ಪರಿಷ್ಕರಿಸಿ ಇಲ್ಲವೇ ತಿರಸ್ಕರಿಸಬೇಕು ಎಂದು ಆಗ್ರಹಿಸಿದ್ದವು.</p>.<p>ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಫ್ರೀಡಂ ಪಾರ್ಕ್ನಲ್ಲಿ ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಮಂಗಳವಾರ ವ್ಯಕ್ತಿಯೊಬ್ಬ ಪೆಟ್ರೋಲ್ ಹಿಡಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ತಡೆದು, ಕರೆದೊಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>