ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯ ದಂಪತಿ ಸೇರಿ ಒಂದೇ ಕುಟುಂಬದ ಐವರ ಸಾವು

Last Updated 13 ಏಪ್ರಿಲ್ 2018, 18:37 IST
ಅಕ್ಷರ ಗಾತ್ರ

ಕುರುಗೋಡು (ಬಳ್ಳಾರಿ ಜಿಲ್ಲೆ): ಇಲ್ಲಿಯ ಭಾಗ್ಯನಗರ ಕ್ಯಾಂಪ್‌ ಬಳಿ, ಚಾಲಕನ ನಿಯಂತ್ರಣ ತ‍ಪ್ಪಿದ ಕಾರೊಂದು ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿಯಾಗಿದ್ದರಿಂದ ವೈದ್ಯ ದಂಪತಿ ಸೇರಿದಂತೆ ಐವರು ಶುಕ್ರವಾರ ಮೃತಪಟ್ಟಿದ್ದಾರೆ.

ಮೃತಪಟ್ಟವರು ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದವರು.

ಡಾ. ಸಂತೋಷ್ (36), ಡಾ. ಅರ್ಚನಾ (34), ಪುತ್ರಿ  ಲಕ್ಷ್ಮಿ (1) ಹಾಗೂ ಸಂತೋಷ್‌ ಅವರ ತಂದೆ ಸಿದ್ದರಾಮಪ್ಪ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಲೀಲಾವತಿ, ಚಿಕಿತ್ಸೆಗೆ ಸ್ಪಂದಿಸದೇ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ಅಸುನೀಗಿದರು. ಇನ್ನೊಬ್ಬ ಪುತ್ರ ತನುಷ್‌ಗೆ (3) ಗಾಯಗಳಾಗಿದ್ದು ಚಿಕಿತ್ಸೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT