ದಾಬಸ್ಪೇಟೆ: ಚಿರತೆಯೊಂದು ಕೊಟ್ಟಿಗೆಗೆ ನುಗ್ಗಿ ಐದು ಮೇಕೆಗಳನ್ನು ಸಾಯಿಸಿರುವ ಘಟನೆ ನೆಲಮಂಗಲ ತಾಲ್ಲೂಕಿನ ನರಸೀಪುರ ಪಂಚಾಯಿತಿ ವ್ಯಾಪ್ತಿಯ ಜಿನ್ನಯ್ಯನ ಪಾಳ್ಯದಲ್ಲಿ ನಡೆದಿದೆ.
ಈ ಮೇಕೆಗಳು ನಾಗರತ್ನಮ್ಮ ಎಂಬುವವರಿಗೆ ಸೇರಿದ್ದಾಗಿವೆ. ಅವರು 60 ಮೇಕೆಗಳನ್ನು ಸಾಕಿದ್ದರು. ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಹಾರ ಕೊಡಿಸುವುದಾಗಿ ತಿಳಿಸಿದ್ದಾರೆ.