‘ನಾನೂ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಕೈತಪ್ಪಿದ್ದರಿಂದ ಸಹಜವಾಗಿ ಕಾರ್ಯಕರ್ತರಿಗೆ ಬೇಸರವಾಗಿದೆ. ಪಕ್ಷದ ಮೇಲೆ ನನಗೆ ಯಾವುದೇ ಅಸಮಾಧಾನವಿಲ್ಲ. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂದು ಒಟ್ಟಾಗಿ ಕಾರ್ಯನಿರ್ವಹಿಸುತ್ತೇವೆ. ಮುಂದೆ ಅವಕಾಶಗಳು ಬರಲಿದ್ದು, ಯಲಹಂಕದಲ್ಲಿ ಸುಧಾಕರ್ಗೆ ಒಳ್ಳೆಯ ಲೀಡ್ ನೀಡಲಾಗುವುದು’ ಎಂದು ಟಿಕೆಟ್ ಆಕಾಂಕ್ಷಿಯಾಗಿದ್ದ ಅಲೋಕ್ ವಿಶ್ವನಾಥ್ ಪ್ರತಿಕ್ರಿಯಿಸಿದರು.