ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಪಕ್ಷದ ಮುಖಂಡ ಕೆ.ಎಚ್. ಮುನಿಯಪ್ಪ, ಶಾಸಕ ಪ್ರಿಯಾಂಕ್ ಖರ್ಗೆ ಜೊತೆ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಭಾಗಕ್ಕೆ ಘೋಷಿಸಿದ್ದ ಹಣ ಯಾಕೆ ಬಳಸಿಕೊಂಡಿಲ್ಲ. ಒಕ್ಕಲಿಗ ಅಭಿವೃದ್ಧಿ ಹಾಗೂ ಬಿಲ್ಲವ ಕೋಶಕ್ಕೆ ಘೋಷಿಸಿದ್ದ ಅನುದಾನ ಬಿಡುಗಡೆ ಯಾಕೆ ಮಾಡಿಲ್ಲ? ಪಂಚಮಸಾಲಿ ಲಿಂಗಾಯತರಿಗೆ ನೀಡಿದ ಭರವಸೆ ಇನ್ನೂ ಈಡೇರಿಲ್ಲ ಯಾಕೆ? ಗೋವಾದಲ್ಲಿ ಕನ್ನಡ ಭವನ ಯಾಕೆ ನಿರ್ಮಾಣ ಆಗಿಲ್ಲ’ ಎಂದು ಪ್ರಶ್ನಿಸಿದರು.