<p><strong>ಕೆ.ಆರ್.ಪುರ:</strong> ಸಹಕಾರ ಸಂಘ ಸದೃಢವಾಗಿ ಬೆಳವಣಿಗೆ ಹೊಂದಲು ಸದಸ್ಯರ ನಡುವೆ ಪರಸ್ಪರ ಸಹಕಾರ ಮುಖ್ಯವಾಗುತ್ತದೆ ಎಂದು ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಅಧ್ಯಕ್ಷ ಮಾವಳ್ಳಿ ಶಂಕರ್ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಎಚ್ಎಎಲ್ನ ವಿಮಾನಪುರದಲ್ಲಿ ಹಮ್ಮಿಕೊಂಡಿದ್ದ ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತದ <a href="">2023-24</a>ನೇ ಸಾಲಿನ ಸರ್ವ ಸದಸ್ಯರ ಸಭೆ ಮತ್ತು ಮೊದಲನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>ಸಹಕಾರ ಸಂಘ ಹೆಮ್ಮರವಾಗಿ ಬೆಳೆಯಲು ನಮ್ಮ ನಡುವೆ ಸಂಬಂಧಗಳು ಗಟ್ಟಿಯಾಗಿರಬೇಕು. ಸಂಘದ ವಿಚಾರದಲ್ಲಿ ಮನಸ್ತಾಪಗಳು ಸಹಜ. ಅವೆಲ್ಲವನ್ನೂ ಸಹಿಸಿಕೊಂಡು ಸಂಘದ ಘನತೆ ಕಾಪಾಡಲು ಶ್ರಮಿಸಬೇಕು. ಸಹಕಾರ ಸಂಘ ಬೆಳೆದರೆ ನಾವು ಅರ್ಥಿಕವಾಗಿ, ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>‘ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ವತಿಯಿಂದ ಬೆಂಗಳೂರು, ಮಾಲೂರು, ಹೊಸಕೋಟೆ, ಕೋಲಾರ ಭಾಗದಲ್ಲಿ ಬಡಾವಣೆ ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದೇವೆ. ಯೋಜನೆ ಸಿದ್ಧವಾದ ನಂತರ ಕಡಿಮೆ ಬೆಲೆಯಲ್ಲಿ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡುವ ಆಲೋಚನೆ ಹೊಂದಿದ್ದೇವೆ’ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಇಲಾಖೆಯ ನಿವೃತ್ತ ಹೆಚ್ಚುವರಿ ನಿಬಂಧಕ ಪುಟ್ಟರಾಜು, ಡಾ.ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಟ್ರಸ್ಟಿ ಡಾ.ಜಿ.ಎನ್.ಉಮೇಶ್, ಉಪಾಧ್ಯಕ್ಷ ಆರ್.ನಾರಾಯಣ್ ಖಜಾಂಚಿ ಮಣಿಪಾಲ್ ರಾಜಪ್ಪ, ನಿರ್ದೇಶಕರಾದ ಮುನಿನಂಜಪ್ಪ, ನಾರಾಯಣಸ್ವಾಮಿ, ವಿ.ಶ್ರೀನಿವಾಸ್ ಚಲಘಟ್ಟ, ಕೆ.ಆರ್.ಮುನಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಸಹಕಾರ ಸಂಘ ಸದೃಢವಾಗಿ ಬೆಳವಣಿಗೆ ಹೊಂದಲು ಸದಸ್ಯರ ನಡುವೆ ಪರಸ್ಪರ ಸಹಕಾರ ಮುಖ್ಯವಾಗುತ್ತದೆ ಎಂದು ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಅಧ್ಯಕ್ಷ ಮಾವಳ್ಳಿ ಶಂಕರ್ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಎಚ್ಎಎಲ್ನ ವಿಮಾನಪುರದಲ್ಲಿ ಹಮ್ಮಿಕೊಂಡಿದ್ದ ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತದ <a href="">2023-24</a>ನೇ ಸಾಲಿನ ಸರ್ವ ಸದಸ್ಯರ ಸಭೆ ಮತ್ತು ಮೊದಲನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>ಸಹಕಾರ ಸಂಘ ಹೆಮ್ಮರವಾಗಿ ಬೆಳೆಯಲು ನಮ್ಮ ನಡುವೆ ಸಂಬಂಧಗಳು ಗಟ್ಟಿಯಾಗಿರಬೇಕು. ಸಂಘದ ವಿಚಾರದಲ್ಲಿ ಮನಸ್ತಾಪಗಳು ಸಹಜ. ಅವೆಲ್ಲವನ್ನೂ ಸಹಿಸಿಕೊಂಡು ಸಂಘದ ಘನತೆ ಕಾಪಾಡಲು ಶ್ರಮಿಸಬೇಕು. ಸಹಕಾರ ಸಂಘ ಬೆಳೆದರೆ ನಾವು ಅರ್ಥಿಕವಾಗಿ, ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>‘ಸಾಕ್ಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ವತಿಯಿಂದ ಬೆಂಗಳೂರು, ಮಾಲೂರು, ಹೊಸಕೋಟೆ, ಕೋಲಾರ ಭಾಗದಲ್ಲಿ ಬಡಾವಣೆ ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದೇವೆ. ಯೋಜನೆ ಸಿದ್ಧವಾದ ನಂತರ ಕಡಿಮೆ ಬೆಲೆಯಲ್ಲಿ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡುವ ಆಲೋಚನೆ ಹೊಂದಿದ್ದೇವೆ’ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಇಲಾಖೆಯ ನಿವೃತ್ತ ಹೆಚ್ಚುವರಿ ನಿಬಂಧಕ ಪುಟ್ಟರಾಜು, ಡಾ.ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಟ್ರಸ್ಟಿ ಡಾ.ಜಿ.ಎನ್.ಉಮೇಶ್, ಉಪಾಧ್ಯಕ್ಷ ಆರ್.ನಾರಾಯಣ್ ಖಜಾಂಚಿ ಮಣಿಪಾಲ್ ರಾಜಪ್ಪ, ನಿರ್ದೇಶಕರಾದ ಮುನಿನಂಜಪ್ಪ, ನಾರಾಯಣಸ್ವಾಮಿ, ವಿ.ಶ್ರೀನಿವಾಸ್ ಚಲಘಟ್ಟ, ಕೆ.ಆರ್.ಮುನಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>