<p><strong>ಬೆಂಗಳೂರು</strong>: ನಗರ ಪಾಲಿಕೆಗಳ ಶಾಲಾ– ಕಾಲೇಜುಗಳಲ್ಲಿ ಉತ್ತಮ ಸೌಲಭ್ಯವಿದ್ದು, ವಿದ್ಯಾರ್ಥಿಗಳು ಇವುಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮಾಗಡಿ ರಸ್ತೆಯಲ್ಲಿ ನಿರ್ಮಿಸಿರುವ ನಗರ ಪಾಲಿಕೆ ಪ್ರಥಮ ದರ್ಜೆ ಕಾಲೇಜು ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಈ ಕಟ್ಟಡದಲ್ಲಿ ಎಲ್.ಕೆ.ಜಿ.ಯಿಂದ ಸ್ನಾತಕೋತ್ತರ ಪದವಿವರೆಗೆ ವರೆಗೆ ಶಿಕ್ಷಣ ಲಭ್ಯವಿದ್ದು ಮಕ್ಕಳು ಈ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಮಟ್ಟದ ಸಾಧನೆ ಮಾಡಬೇಕು ಎಂದರು.</p>.<p>ಬಿ.ಸಿ.ಎ ಮತ್ತು ಎಂ.ಸಿ.ಎ ಕೋರ್ಸ್ಗೆ ಬೇಡಿಕೆ ಸಲ್ಲಿಸಿದ್ದು, ಅಧಿಕಾರಿಗಳು ಅದಕ್ಕೆ ಅನುಮೋದನೆ ನೀಡಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು.</p>.<p>ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ₹4 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡ–1ರಲ್ಲಿ 6 ತರಗತಿ ಕೊಠಡಿಗಳು ಹಾಗೂ ಶೌಚಾಲಯ ಸೌಲಭ್ಯಗಳು ಲಭ್ಯವಿವೆ. ಕಟ್ಟಡ–2ರಲ್ಲಿ 6 ತರಗತಿ ಕೊಠಡಿಗಳು, ಶೌಚಾಲಯಗಳು ಹಾಗೂ ಸೆಲ್ಲರ್ (ಊಟದ ಕೊಠಡಿ) ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕೇಂದ್ರ ನಗರ ಪಾಲಿಕೆ ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಎಂಜಿನಿಯರ್ ಚಂದ್ರಶೇಖರ್, ಕಾರ್ಯಪಾಲಕ ಎಂಜಿನಿಯರ್ ಮಧುಸೂಧನ್, ಶಿಕ್ಷಣ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರ ಪಾಲಿಕೆಗಳ ಶಾಲಾ– ಕಾಲೇಜುಗಳಲ್ಲಿ ಉತ್ತಮ ಸೌಲಭ್ಯವಿದ್ದು, ವಿದ್ಯಾರ್ಥಿಗಳು ಇವುಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮಾಗಡಿ ರಸ್ತೆಯಲ್ಲಿ ನಿರ್ಮಿಸಿರುವ ನಗರ ಪಾಲಿಕೆ ಪ್ರಥಮ ದರ್ಜೆ ಕಾಲೇಜು ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಈ ಕಟ್ಟಡದಲ್ಲಿ ಎಲ್.ಕೆ.ಜಿ.ಯಿಂದ ಸ್ನಾತಕೋತ್ತರ ಪದವಿವರೆಗೆ ವರೆಗೆ ಶಿಕ್ಷಣ ಲಭ್ಯವಿದ್ದು ಮಕ್ಕಳು ಈ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಉನ್ನತ ಮಟ್ಟದ ಸಾಧನೆ ಮಾಡಬೇಕು ಎಂದರು.</p>.<p>ಬಿ.ಸಿ.ಎ ಮತ್ತು ಎಂ.ಸಿ.ಎ ಕೋರ್ಸ್ಗೆ ಬೇಡಿಕೆ ಸಲ್ಲಿಸಿದ್ದು, ಅಧಿಕಾರಿಗಳು ಅದಕ್ಕೆ ಅನುಮೋದನೆ ನೀಡಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು.</p>.<p>ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ₹4 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡ–1ರಲ್ಲಿ 6 ತರಗತಿ ಕೊಠಡಿಗಳು ಹಾಗೂ ಶೌಚಾಲಯ ಸೌಲಭ್ಯಗಳು ಲಭ್ಯವಿವೆ. ಕಟ್ಟಡ–2ರಲ್ಲಿ 6 ತರಗತಿ ಕೊಠಡಿಗಳು, ಶೌಚಾಲಯಗಳು ಹಾಗೂ ಸೆಲ್ಲರ್ (ಊಟದ ಕೊಠಡಿ) ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕೇಂದ್ರ ನಗರ ಪಾಲಿಕೆ ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಎಂಜಿನಿಯರ್ ಚಂದ್ರಶೇಖರ್, ಕಾರ್ಯಪಾಲಕ ಎಂಜಿನಿಯರ್ ಮಧುಸೂಧನ್, ಶಿಕ್ಷಣ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>