<p><strong>ನೆಲಮಂಗಲ:</strong> ಹೃದಯವಂತಿಕೆಯ ಸಂಸ್ಕಾರವನ್ನು ತಂದೆ ತಾಯಿಗಳು ಆಚರಿಸಿದಾಗ ಮಕ್ಕಳು ಅನುಸರಿಸುತ್ತಾರೆ. ಆಗ ಮನೆಯೇ ಪಾಠಶಾಲೆಯಾಗುತ್ತದೆ ಎಂದು ಸಿದ್ದಾರ್ಥ ವಿಶ್ವವಿದ್ಯಾಲಯದ ಕುಲಪತಿ ಕೆ.ಬಿ. ಲಿಂಗೇಗೌಡ ತಿಳಿಸಿದರು.</p>.<p>ಕಂಬಯ್ಯನಪಾಳ್ಯದಲ್ಲಿರುವ ಹರ್ಷ ಬಯಲು ರಂಗಮಂದಿರಲ್ಲಿ ಹಮ್ಮಿಕೊಂಡಿದ್ದ ಹರ್ಷ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಕ್ಯಾನ್ಸರ್ ಬಗ್ಗೆ ಭಯ ಬೇಡ. ಅದು ಗುಣಪಡಿಸುವ ಕಾಯಿಲೆ. ಕಿದ್ವಾಯಿ ಆಸ್ಪತ್ರೆಯಲ್ಲಿ ನಿರ್ದೇಶಕನಾಗಿ, ವೈದ್ಯನಾಗಿ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇನೆ’ ಎಂದು ಕ್ಯಾನ್ಸರ್ ರೋಗದ ಬಗ್ಗೆ ಅರಿವು ಮೂಡಿಸಿದರು.</p>.<p>ವಿದ್ಯಾರ್ಥಿಗಳು ವಿಷ್ಣುವಿನ ವಿಶ್ವರೂಪ, ಹೊಯ್ಸಳ ಸಾಮ್ರಾಜ್ಯ ಸ್ಥಾಪನೆ, ಮಹಿಷಮರ್ಧನ ರೂಪಕಗಳನ್ನು ಪ್ರದರ್ಶಿಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.</p>.<p>ಸಂಸ್ಥೆಯ ಅಧ್ಯಕ್ಷ ಎಸ್. ಶಿವಕುಮಾರ್, ಉಪಾಧ್ಯಕ್ಷೆ ಗಿರಿಜಾ, ಕಾರ್ಯದರ್ಶಿ ಹರ್ಷ ಇದ್ದರು. ಸಹಕಾರ್ಯದರ್ಶಿ ಯಶಸ್ ಸಂಸ್ಥೆಯ ಮುಂದಿನ ಯೋಜನೆಗಳನ್ನು ವಿವರಿಸಿದರು. ಪಿಯು ಕಾಲೇಜಿನ ಪ್ರಾಂಶುಪಾಲ ಜಿ.ಸತೀಶ್, ಪ್ರೌಢಶಾಲೆಯ ಮುಖ್ಯಶಿಕ್ಷಕಿ ಬಿಂದುಶರ್ಮ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಪೂರ್ಣಿಮಾ ವಾರ್ಷಿಕ ವರದಿ ವಾಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಹೃದಯವಂತಿಕೆಯ ಸಂಸ್ಕಾರವನ್ನು ತಂದೆ ತಾಯಿಗಳು ಆಚರಿಸಿದಾಗ ಮಕ್ಕಳು ಅನುಸರಿಸುತ್ತಾರೆ. ಆಗ ಮನೆಯೇ ಪಾಠಶಾಲೆಯಾಗುತ್ತದೆ ಎಂದು ಸಿದ್ದಾರ್ಥ ವಿಶ್ವವಿದ್ಯಾಲಯದ ಕುಲಪತಿ ಕೆ.ಬಿ. ಲಿಂಗೇಗೌಡ ತಿಳಿಸಿದರು.</p>.<p>ಕಂಬಯ್ಯನಪಾಳ್ಯದಲ್ಲಿರುವ ಹರ್ಷ ಬಯಲು ರಂಗಮಂದಿರಲ್ಲಿ ಹಮ್ಮಿಕೊಂಡಿದ್ದ ಹರ್ಷ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಕ್ಯಾನ್ಸರ್ ಬಗ್ಗೆ ಭಯ ಬೇಡ. ಅದು ಗುಣಪಡಿಸುವ ಕಾಯಿಲೆ. ಕಿದ್ವಾಯಿ ಆಸ್ಪತ್ರೆಯಲ್ಲಿ ನಿರ್ದೇಶಕನಾಗಿ, ವೈದ್ಯನಾಗಿ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇನೆ’ ಎಂದು ಕ್ಯಾನ್ಸರ್ ರೋಗದ ಬಗ್ಗೆ ಅರಿವು ಮೂಡಿಸಿದರು.</p>.<p>ವಿದ್ಯಾರ್ಥಿಗಳು ವಿಷ್ಣುವಿನ ವಿಶ್ವರೂಪ, ಹೊಯ್ಸಳ ಸಾಮ್ರಾಜ್ಯ ಸ್ಥಾಪನೆ, ಮಹಿಷಮರ್ಧನ ರೂಪಕಗಳನ್ನು ಪ್ರದರ್ಶಿಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.</p>.<p>ಸಂಸ್ಥೆಯ ಅಧ್ಯಕ್ಷ ಎಸ್. ಶಿವಕುಮಾರ್, ಉಪಾಧ್ಯಕ್ಷೆ ಗಿರಿಜಾ, ಕಾರ್ಯದರ್ಶಿ ಹರ್ಷ ಇದ್ದರು. ಸಹಕಾರ್ಯದರ್ಶಿ ಯಶಸ್ ಸಂಸ್ಥೆಯ ಮುಂದಿನ ಯೋಜನೆಗಳನ್ನು ವಿವರಿಸಿದರು. ಪಿಯು ಕಾಲೇಜಿನ ಪ್ರಾಂಶುಪಾಲ ಜಿ.ಸತೀಶ್, ಪ್ರೌಢಶಾಲೆಯ ಮುಖ್ಯಶಿಕ್ಷಕಿ ಬಿಂದುಶರ್ಮ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಪೂರ್ಣಿಮಾ ವಾರ್ಷಿಕ ವರದಿ ವಾಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>