ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಹೊಸ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬೆಂಗಳೂರು ಘಟಕದ ಅಧ್ಯಕ್ಷ ಮಿತೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಘಟಕದ ಕಾರ್ಯದರ್ಶಿ ಪ್ರಸಾದ್ ಕುಮಾರ್ ಸಿ.ಪಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಶ್ರೀಧರ್ ಡಿ. ಪೂಜಾರಿ, ಉಪಾಧ್ಯಕ್ಷ ಶಶಿಧರ್ ಕೋಟ್ಯಾನ್, ಸಕೇಶ್ ಬುನ್ನನ್, ನಿಯೋಜಿತ ಅಧ್ಯಕ್ಷ ಪ್ರಸಾದ್ ಕುಮಾರ್ ಕಲ್ಲಾಜೆ, ನಿಯೋಜಿತ ಕಾರ್ಯದರ್ಶಿ ಧನುಷ್ ಭಾಗವಹಿಸಿದ್ದರು.