<p><strong>ಬೆಂಗಳೂರು:</strong> ‘ದೆಹಲಿಯಂತೆ ಕರ್ನಾಟಕ ಸರ್ಕಾರವೂ ಕೋವಿಡ್ ಸಂದರ್ಭವನ್ನು ಶೈಕ್ಷಣಿಕ ಕ್ರಾಂತಿಗೆ ಬಳಸಿಕೊಳ್ಳಬೇಕು’ ಎಂದುಆಮ್ ಆದ್ಮಿ ಪಕ್ಷದ (ಎಎಪಿ) ದೆಹಲಿ ಶಾಸಕಿ ಅತಿಶಿ ಮರ್ಲೆನಾ ಸಲಹೆ ನೀಡಿದರು.</p>.<p>ಎಎಪಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಶೈಕ್ಷಣಿಕ ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಏಳು ವರ್ಷಗಳ ಹಿಂದೆ ಕರ್ನಾಟಕದ ಸರ್ಕಾರಿ ಶಾಲೆಗಳಂತೆಯೇ ದೆಹಲಿ ಶಾಲೆಗಳಿದ್ದವು. ಅಲ್ಲಿಯೂ ಮೂಲ ಸೌಕರ್ಯಗಳು ಇರಲಿಲ್ಲ. ಶಿಕ್ಷಣ ಕ್ರಾಂತಿಗಾಗಿ ಬಜೆಟ್ನಲ್ಲಿ ಶೇ 25ರಷ್ಟು ಹಣವನ್ನು ಮೀಸಲಿಟ್ಟು, ಸಮರ್ಪಕವಾಗಿ ಬಳಕೆ ಮಾಡಲಾಯಿತು. ಇದರಿಂದ ಅಲ್ಲಿನ ಶಿಕ್ಷಣ ವ್ಯವಸ್ಥೆಯೇ ಬದಲಾಯಿತು’ ಎಂದರು.</p>.<p>‘ಶಿಕ್ಷಣದಲ್ಲಿ ಬದಲಾವಣೆ ತರಬೇಕೆಂಬ ಇಚ್ಛಾಶಕ್ತಿ ಸರ್ಕಾರಕ್ಕೆ ಇದ್ದರೆ ಸಾಕು. ಕರ್ನಾಟಕ ಸೇರಿದಂತೆ ಹಲವು ರಾಜ್ಯ ಸರ್ಕಾರಗಳಿಗೆ ಶಿಕ್ಷಣ ಆದ್ಯತೆಯ ವಿಷಯವೇ ಆಗಿಲ್ಲ. ಕೋವಿಡ್ ನಂತರ ಶಿಕ್ಷಣ ವ್ಯವಸ್ಥೆಯೇ ದೇಶಕ್ಕೆ ಹೆಚ್ಚು ಮಾರಕವಾಗಿದೆ’ ಎಂದು ದೂರಿದರು.</p>.<p>‘ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನೋಡುವ ರೀತಿ ಬದಲಾಗಬೇಕು. ಖಾಸಗಿ ಶಾಲೆಗಳ ಲಾಬಿಗೆ ಮಣಿಯದೆ, ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿರೆಡ್ಡಿ, ಮುಖಂಡರಾದ ಎಚ್.ಡಿ.ಬಸವರಾಜು, ಶಿಕ್ಷಣ ತಜ್ಞ ಗುರುರಾಜ ಕರಜಗಿ, ತಾನ್ಯಾ ಜಯರಾಜ್, ಪುಷ್ಪಾ ತಂತ್ರಿ, ಬಿ.ಎಸ್.ಸೂರ್ಯಪ್ರಕಾಶ್ ಹಾಗೂ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದೆಹಲಿಯಂತೆ ಕರ್ನಾಟಕ ಸರ್ಕಾರವೂ ಕೋವಿಡ್ ಸಂದರ್ಭವನ್ನು ಶೈಕ್ಷಣಿಕ ಕ್ರಾಂತಿಗೆ ಬಳಸಿಕೊಳ್ಳಬೇಕು’ ಎಂದುಆಮ್ ಆದ್ಮಿ ಪಕ್ಷದ (ಎಎಪಿ) ದೆಹಲಿ ಶಾಸಕಿ ಅತಿಶಿ ಮರ್ಲೆನಾ ಸಲಹೆ ನೀಡಿದರು.</p>.<p>ಎಎಪಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಶೈಕ್ಷಣಿಕ ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಏಳು ವರ್ಷಗಳ ಹಿಂದೆ ಕರ್ನಾಟಕದ ಸರ್ಕಾರಿ ಶಾಲೆಗಳಂತೆಯೇ ದೆಹಲಿ ಶಾಲೆಗಳಿದ್ದವು. ಅಲ್ಲಿಯೂ ಮೂಲ ಸೌಕರ್ಯಗಳು ಇರಲಿಲ್ಲ. ಶಿಕ್ಷಣ ಕ್ರಾಂತಿಗಾಗಿ ಬಜೆಟ್ನಲ್ಲಿ ಶೇ 25ರಷ್ಟು ಹಣವನ್ನು ಮೀಸಲಿಟ್ಟು, ಸಮರ್ಪಕವಾಗಿ ಬಳಕೆ ಮಾಡಲಾಯಿತು. ಇದರಿಂದ ಅಲ್ಲಿನ ಶಿಕ್ಷಣ ವ್ಯವಸ್ಥೆಯೇ ಬದಲಾಯಿತು’ ಎಂದರು.</p>.<p>‘ಶಿಕ್ಷಣದಲ್ಲಿ ಬದಲಾವಣೆ ತರಬೇಕೆಂಬ ಇಚ್ಛಾಶಕ್ತಿ ಸರ್ಕಾರಕ್ಕೆ ಇದ್ದರೆ ಸಾಕು. ಕರ್ನಾಟಕ ಸೇರಿದಂತೆ ಹಲವು ರಾಜ್ಯ ಸರ್ಕಾರಗಳಿಗೆ ಶಿಕ್ಷಣ ಆದ್ಯತೆಯ ವಿಷಯವೇ ಆಗಿಲ್ಲ. ಕೋವಿಡ್ ನಂತರ ಶಿಕ್ಷಣ ವ್ಯವಸ್ಥೆಯೇ ದೇಶಕ್ಕೆ ಹೆಚ್ಚು ಮಾರಕವಾಗಿದೆ’ ಎಂದು ದೂರಿದರು.</p>.<p>‘ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನೋಡುವ ರೀತಿ ಬದಲಾಗಬೇಕು. ಖಾಸಗಿ ಶಾಲೆಗಳ ಲಾಬಿಗೆ ಮಣಿಯದೆ, ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿರೆಡ್ಡಿ, ಮುಖಂಡರಾದ ಎಚ್.ಡಿ.ಬಸವರಾಜು, ಶಿಕ್ಷಣ ತಜ್ಞ ಗುರುರಾಜ ಕರಜಗಿ, ತಾನ್ಯಾ ಜಯರಾಜ್, ಪುಷ್ಪಾ ತಂತ್ರಿ, ಬಿ.ಎಸ್.ಸೂರ್ಯಪ್ರಕಾಶ್ ಹಾಗೂ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>