400 ಮೀಟರ್ ರಸ್ತೆ ವಿಸ್ತರಣೆಗೆ ಅರಮನೆಗೆ ಸೇರಿದ 15.39 ಎಕರೆ ಭೂಮಿಗೆ ₹ 1,400 ಕೋಟಿ ಮೌಲ್ಯದ ಟಿಡಿಆರ್ ನೀಡಲು ಸರ್ಕಾರ ಒಪ್ಪಿದೆ. ರೈತರ ಭೂಮಿ ವಶಪಡಿಸಿಕೊಂಡಾಗಲೂ ಇದೇ ರೀತಿ ದೊಡ್ಡಮೊತ್ತದ ಪರಿಹಾರವನ್ನು ಸರ್ಕಾರ ನೀಡುತ್ತದೆಯೇ? ಅರ್ಕಾವತಿ, ಕೆಂಪೇಗೌಡ, ಶಿವರಾಮ ಕಾರಂತ ಮುಂತಾದ ಬಡಾವಣೆಗಳ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡವರು ಇಂದಿಗೂ ಕೋರ್ಟ್ ಕಚೇರಿ ಅಲೆಯುತ್ತಿದ್ದಾರೆ ಎಂದು ಎಎಪಿ ಸಾಮಾಜಿಕ ಜಾಲತಾಣದ ರಾಜ್ಯ ಉಸ್ತುವಾರಿ ದರ್ಶನ್ ಜೈನ್ ಬೇಸರ ವ್ಯಕ್ತಪಡಿಸಿದರು.