<p><strong>ಬೆಂಗಳೂರು:</strong> ದಲಿತರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕಾಳಜಿ ಇದ್ದರೆ ಕಾಂಗ್ರೆಸ್ನ ಮುಂದಿನ ಮುಖ್ಯಮಂತ್ರಿ ದಲಿತ ಸಮುದಾಯಕ್ಕೆ ಸೇರಿದವರು ಎಂಬುದನ್ನು ಈಗಲೇ ಘೋಷಿಸಲಿ ಎಂದು ಬಿಜೆಪಿ ಸವಾಲು ಹಾಕಿದೆ.</p>.<p>ದಲಿತನೊಬ್ಬ ಮುಖ್ಯಮಂತ್ರಿ ಆಗಬಾರದು ಎಂದು ಜಿ.ಪರಮೇಶ್ವರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಸಿದ್ದರಾಮಯ್ಯ ಈಗ ದಲಿತರ ಬಗ್ಗೆ ಪ್ರೇಮ ತೋರಿಸುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.</p>.<p>ಬಿಜೆಪಿ ಮುಂದಿನ ಮುಖ್ಯಮಂತ್ರಿಯನ್ನು ದಲಿತ ಸಮುದಾಯಕ್ಕೆ ಸೇರಿದವರನ್ನು ಮಾಡಲಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದೆ. ಸಿದ್ದರಾಮಯ್ಯ ಅವರು ದಲಿತ ಮುಖ್ಯಮಂತ್ರಿ ವಿಚಾರದಲ್ಲಿ ಮಾತನಾಡುವುದೂ ಒಂದೇ, ಗಾಂಧಿ ಕುಡಿಗಳು ಕುಟುಂಬ ರಾಜಕಾರಣದ ಬಗ್ಗೆ ಪ್ರವಚನ ನೀಡುವುದೂ ಒಂದೇ ಎಂದು ವ್ಯಂಗ್ಯವಾಡಿದೆ.</p>.<p>ತಾವೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವಲ್ಲಿ ತರಾತುರಿಯಲ್ಲಿರುವ ಸಿದ್ದರಾಮಯ್ಯ ಅವರು ದಲಿತ ವ್ಯಕ್ತಿಯನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದಲಿತರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕಾಳಜಿ ಇದ್ದರೆ ಕಾಂಗ್ರೆಸ್ನ ಮುಂದಿನ ಮುಖ್ಯಮಂತ್ರಿ ದಲಿತ ಸಮುದಾಯಕ್ಕೆ ಸೇರಿದವರು ಎಂಬುದನ್ನು ಈಗಲೇ ಘೋಷಿಸಲಿ ಎಂದು ಬಿಜೆಪಿ ಸವಾಲು ಹಾಕಿದೆ.</p>.<p>ದಲಿತನೊಬ್ಬ ಮುಖ್ಯಮಂತ್ರಿ ಆಗಬಾರದು ಎಂದು ಜಿ.ಪರಮೇಶ್ವರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಸಿದ್ದರಾಮಯ್ಯ ಈಗ ದಲಿತರ ಬಗ್ಗೆ ಪ್ರೇಮ ತೋರಿಸುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.</p>.<p>ಬಿಜೆಪಿ ಮುಂದಿನ ಮುಖ್ಯಮಂತ್ರಿಯನ್ನು ದಲಿತ ಸಮುದಾಯಕ್ಕೆ ಸೇರಿದವರನ್ನು ಮಾಡಲಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದೆ. ಸಿದ್ದರಾಮಯ್ಯ ಅವರು ದಲಿತ ಮುಖ್ಯಮಂತ್ರಿ ವಿಚಾರದಲ್ಲಿ ಮಾತನಾಡುವುದೂ ಒಂದೇ, ಗಾಂಧಿ ಕುಡಿಗಳು ಕುಟುಂಬ ರಾಜಕಾರಣದ ಬಗ್ಗೆ ಪ್ರವಚನ ನೀಡುವುದೂ ಒಂದೇ ಎಂದು ವ್ಯಂಗ್ಯವಾಡಿದೆ.</p>.<p>ತಾವೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವಲ್ಲಿ ತರಾತುರಿಯಲ್ಲಿರುವ ಸಿದ್ದರಾಮಯ್ಯ ಅವರು ದಲಿತ ವ್ಯಕ್ತಿಯನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>