<p><strong>ಬೆಂಗಳೂರು</strong>: ರಂಗಭೂಮಿ ಹಾಗೂ ಸಾಹಿತ್ಯ ಸದಾ ಪ್ರಶ್ನೆ ಮಾಡಲು ಪ್ರೇರೇಪಿಸುತ್ತದೆ. ಸ್ಥಗಿತಗೊಂಡ ಸಮಾಜವನ್ನು ಎಚ್ಚರಗೊಳಿಸುವ ಕೆಲಸ ನಿರಂತರವಾಗಿರಲಿ ಎಂದು ಸಾಹಿತಿ ಜಿ ಎನ್ ಮೋಹನ್ ಅಭಿಪ್ರಾಯಪಟ್ಟರು. </p><p>ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ರಾಷ್ಟ್ರೀಯ ರಂಗಶಾಲೆ ಹಮ್ಮಿಕೊಂಡಿದ್ದ ರಂಗ ಪರಿಷೆಯಲ್ಲಿ ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. </p><p>ಪುಸ್ತಕಗಳನ್ನು ದ್ವೇಷಿಸುವ ನಾಜಿ ಕಾಲವಿತ್ತು. ಈಗ ದೇಶದೆಲ್ಲೆಡೆ ಅಂತಹದೇ ವಾತಾವರಣವನ್ನು ಸೃಷ್ಟಿಸಿ, ಪುಸ್ತಕ ದ್ವೇಷವನ್ನು ಹರಡಲಾಗುತ್ತಿದೆ. ಪ್ರಶ್ನೆ ಮಾಡುವ ಮನಸ್ಸನ್ನು ಮುರುಟಿ ಹಾಕುವ ಯತ್ನ ನಡೆಯುತ್ತಿದೆ. ಇದರ ವಿರುದ್ಧ ಜಾಗೃತಿ ಸದಾ ಅಗತ್ಯ ಎಂದರು. </p><p>ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್ ಎನ್ ಮುಕುಂದರಾಜ್ ಅವರು ಮಾತನಾಡಿ ರಂಗಭೂಮಿ ಹಾಗೂ ಸಾಹಿತ್ಯವನ್ನು ಬೇರ್ಪಡಿಸಿ ನೋಡಲು ಸಾಧ್ಯವಿಲ್ಲ. ಎರಡೂ ಸಹಾ ಗಂಡಬೇರುಂಡದಂತೆ ಎಂದರು. </p><p>ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ನಾಗರಾಜ ಮೂರ್ತಿ ಅವರು ಮಾತನಾಡಿ ಮಾನವೀಯ ಸಮಾಜವನ್ನು ಸೃಷ್ಟಿಸುವುದು ಇಂದಿನ ಅಗತ್ಯ. ಮನಸ್ಸನ್ನು ಕಲುಷಿತಗೊಳಿಸುತ್ತಿರುವ ಕಾಲದ ಬಗ್ಗೆ ಎಚ್ಚರ ಇರಲಿ ಎಂದರು. </p><p>ಕಾವ್ಯ ಪರಿಷೆ ಮುಖ್ಯಸ್ಥರಾದ ಮಲ್ಲಿಕಾರ್ಜುನ ಮಹಾಮನೆ, ಕವಿ ಅಂಕಣಕಾರ ಬಿ ಎನ್ ಮಲ್ಲೇಶ್, ಅಕಾಡೆಮಿ ಸದಸ್ಯರುಗಳಾದ ಮಮತಾ ಅರಸೀಕೆರೆ, ರವಿಕುಮಾರ್ ಭಾಗಿ ಉಪಸ್ಥಿತರಿದ್ದರು.</p><p>ಟಿ.ಗೋವಿಂದರಾಜು, ಬ್ಯಾಡರಹಳ್ಳಿ ಶಿವರಾಜು, ಪ್ರವೀಣ್ ಮೈಸೂರು, ಪದ್ಮ ಚಿನ್ಮಯಿ, ಚಂದ್ರ ಮೊಗೇರ, ಪುನೀತ್ ತಥಾಗತ್, ಕಸ್ತೂರಿಪತ್ತಾರ, ಪ್ರಕೃತಿ ಶೆಟ್ಟಿ, ರುಕ್ಮಿಣಿ ನಾಯರ್ ಕವನ ವಾಚಿಸಿದರು</p><p>ನಂತರ ನಡೆದ ಸಮಾರಂಭದಲ್ಲಿ ಕಲಾವಿದೆ ಗಿರಿಜಾ ಲೋಕೇಶ್ ಅವರಿಗೆ ಗೌರವ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಂಗಭೂಮಿ ಹಾಗೂ ಸಾಹಿತ್ಯ ಸದಾ ಪ್ರಶ್ನೆ ಮಾಡಲು ಪ್ರೇರೇಪಿಸುತ್ತದೆ. ಸ್ಥಗಿತಗೊಂಡ ಸಮಾಜವನ್ನು ಎಚ್ಚರಗೊಳಿಸುವ ಕೆಲಸ ನಿರಂತರವಾಗಿರಲಿ ಎಂದು ಸಾಹಿತಿ ಜಿ ಎನ್ ಮೋಹನ್ ಅಭಿಪ್ರಾಯಪಟ್ಟರು. </p><p>ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ರಾಷ್ಟ್ರೀಯ ರಂಗಶಾಲೆ ಹಮ್ಮಿಕೊಂಡಿದ್ದ ರಂಗ ಪರಿಷೆಯಲ್ಲಿ ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. </p><p>ಪುಸ್ತಕಗಳನ್ನು ದ್ವೇಷಿಸುವ ನಾಜಿ ಕಾಲವಿತ್ತು. ಈಗ ದೇಶದೆಲ್ಲೆಡೆ ಅಂತಹದೇ ವಾತಾವರಣವನ್ನು ಸೃಷ್ಟಿಸಿ, ಪುಸ್ತಕ ದ್ವೇಷವನ್ನು ಹರಡಲಾಗುತ್ತಿದೆ. ಪ್ರಶ್ನೆ ಮಾಡುವ ಮನಸ್ಸನ್ನು ಮುರುಟಿ ಹಾಕುವ ಯತ್ನ ನಡೆಯುತ್ತಿದೆ. ಇದರ ವಿರುದ್ಧ ಜಾಗೃತಿ ಸದಾ ಅಗತ್ಯ ಎಂದರು. </p><p>ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್ ಎನ್ ಮುಕುಂದರಾಜ್ ಅವರು ಮಾತನಾಡಿ ರಂಗಭೂಮಿ ಹಾಗೂ ಸಾಹಿತ್ಯವನ್ನು ಬೇರ್ಪಡಿಸಿ ನೋಡಲು ಸಾಧ್ಯವಿಲ್ಲ. ಎರಡೂ ಸಹಾ ಗಂಡಬೇರುಂಡದಂತೆ ಎಂದರು. </p><p>ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ನಾಗರಾಜ ಮೂರ್ತಿ ಅವರು ಮಾತನಾಡಿ ಮಾನವೀಯ ಸಮಾಜವನ್ನು ಸೃಷ್ಟಿಸುವುದು ಇಂದಿನ ಅಗತ್ಯ. ಮನಸ್ಸನ್ನು ಕಲುಷಿತಗೊಳಿಸುತ್ತಿರುವ ಕಾಲದ ಬಗ್ಗೆ ಎಚ್ಚರ ಇರಲಿ ಎಂದರು. </p><p>ಕಾವ್ಯ ಪರಿಷೆ ಮುಖ್ಯಸ್ಥರಾದ ಮಲ್ಲಿಕಾರ್ಜುನ ಮಹಾಮನೆ, ಕವಿ ಅಂಕಣಕಾರ ಬಿ ಎನ್ ಮಲ್ಲೇಶ್, ಅಕಾಡೆಮಿ ಸದಸ್ಯರುಗಳಾದ ಮಮತಾ ಅರಸೀಕೆರೆ, ರವಿಕುಮಾರ್ ಭಾಗಿ ಉಪಸ್ಥಿತರಿದ್ದರು.</p><p>ಟಿ.ಗೋವಿಂದರಾಜು, ಬ್ಯಾಡರಹಳ್ಳಿ ಶಿವರಾಜು, ಪ್ರವೀಣ್ ಮೈಸೂರು, ಪದ್ಮ ಚಿನ್ಮಯಿ, ಚಂದ್ರ ಮೊಗೇರ, ಪುನೀತ್ ತಥಾಗತ್, ಕಸ್ತೂರಿಪತ್ತಾರ, ಪ್ರಕೃತಿ ಶೆಟ್ಟಿ, ರುಕ್ಮಿಣಿ ನಾಯರ್ ಕವನ ವಾಚಿಸಿದರು</p><p>ನಂತರ ನಡೆದ ಸಮಾರಂಭದಲ್ಲಿ ಕಲಾವಿದೆ ಗಿರಿಜಾ ಲೋಕೇಶ್ ಅವರಿಗೆ ಗೌರವ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>