<p>ಬೆಂಗಳೂರು: ‘ರಾಜ್ಯದಲ್ಲಿರುವ ಗಂಭೀರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ‘ಲೆಟ್ಸ್ ಟೇಕ್ ಚಾರ್ಜ್’ ಅಭಿಯಾನದಡಿ ಸ್ಪರ್ಧೆ ಆಯೋಜಿಸಲಾಗಿದೆ’ ಎಂದು ಯುವ ಕಾಂಗ್ರೆಸ್ನ ಬೆಂಗಳೂರು ಘಟಕದ ಅಧ್ಯಕ್ಷ ಮೊಹಮದ್ ನಲಪಾಡ್ ತಿಳಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಇಚ್ಛಿಸುವ ಯುವಜನಾಂಗಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸ್ಪರ್ಧೆ ಆಯೋಜಿಸಲಾಗಿದೆ. ಈಗಾಗಲೇ 10 ಸಾವಿರಕ್ಕೂ ಹೆಚ್ಚು ಪರಿಹಾರ ಮಾರ್ಗಗಳನ್ನು ಯುವಕ, ಯುವತಿಯರು ಹಂಚಿಕೊಂಡಿದ್ದಾರೆ' ಎಂದರು.</p>.<p>‘ಬೆಂಗಳೂರು ನಗರ ಜಿಲ್ಲೆಯಿಂದ ಹೆಚ್ಚಿನ ಮಂದಿ ಪರಿಹಾರ ಸೂಚಿಸಿದ್ದು, ಮೈಸೂರು, ಶಿವಮೊಗ್ಗ, ತುಮಕೂರು, ಧಾರವಾಡ, ಹಾವೇರಿ, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ, ಕೊಪ್ಪಳ, ಬೀದರ್, ರಾಯಚೂರು ಮತ್ತು ಉಡುಪಿ ಜಿಲ್ಲೆಗಳಿಂದ ಸ್ಪರ್ಧಾಳುಗಳು ನೋಂದಣಿ ಮಾಡಿಕೊಂಡಿದ್ದಾರೆ’ ಎಂದು ವಿವರಿಸಿದರು.</p>.<p>‘ಸ್ಪರ್ಧೆಯಲ್ಲಿ ಭಾಗವಹಿಸಿ, ಉತ್ತಮಪರಿಹಾರ ಸೂಚಿಸುವ ವಿಜೇತರಿಗೆ ಐಫೋನ್-12 (ಪ್ರಥಮ), ಸ್ಯಾಮ್ಸಂಗ್ ಗ್ಯಾಲಕ್ಸಿ ಎ-51 (ದ್ವಿತೀಯ), ಗ್ಯಾಲಕ್ಸಿಎ21 (ತೃತೀಯ) ಹಾಗೂ ಟ್ಯಾಬ್(ನಾಲ್ಕನೇ ಬಹುಮಾನ) ನೀಡಲಾಗುವುದು’ ಎಂದು ನಲಪಾಡ್ ತಿಳಿಸಿದರು.</p>.<p class="Subhead"><strong>ಮಾಹಿತಿಗೆ: 9999835988</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ರಾಜ್ಯದಲ್ಲಿರುವ ಗಂಭೀರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ‘ಲೆಟ್ಸ್ ಟೇಕ್ ಚಾರ್ಜ್’ ಅಭಿಯಾನದಡಿ ಸ್ಪರ್ಧೆ ಆಯೋಜಿಸಲಾಗಿದೆ’ ಎಂದು ಯುವ ಕಾಂಗ್ರೆಸ್ನ ಬೆಂಗಳೂರು ಘಟಕದ ಅಧ್ಯಕ್ಷ ಮೊಹಮದ್ ನಲಪಾಡ್ ತಿಳಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಇಚ್ಛಿಸುವ ಯುವಜನಾಂಗಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸ್ಪರ್ಧೆ ಆಯೋಜಿಸಲಾಗಿದೆ. ಈಗಾಗಲೇ 10 ಸಾವಿರಕ್ಕೂ ಹೆಚ್ಚು ಪರಿಹಾರ ಮಾರ್ಗಗಳನ್ನು ಯುವಕ, ಯುವತಿಯರು ಹಂಚಿಕೊಂಡಿದ್ದಾರೆ' ಎಂದರು.</p>.<p>‘ಬೆಂಗಳೂರು ನಗರ ಜಿಲ್ಲೆಯಿಂದ ಹೆಚ್ಚಿನ ಮಂದಿ ಪರಿಹಾರ ಸೂಚಿಸಿದ್ದು, ಮೈಸೂರು, ಶಿವಮೊಗ್ಗ, ತುಮಕೂರು, ಧಾರವಾಡ, ಹಾವೇರಿ, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ, ಕೊಪ್ಪಳ, ಬೀದರ್, ರಾಯಚೂರು ಮತ್ತು ಉಡುಪಿ ಜಿಲ್ಲೆಗಳಿಂದ ಸ್ಪರ್ಧಾಳುಗಳು ನೋಂದಣಿ ಮಾಡಿಕೊಂಡಿದ್ದಾರೆ’ ಎಂದು ವಿವರಿಸಿದರು.</p>.<p>‘ಸ್ಪರ್ಧೆಯಲ್ಲಿ ಭಾಗವಹಿಸಿ, ಉತ್ತಮಪರಿಹಾರ ಸೂಚಿಸುವ ವಿಜೇತರಿಗೆ ಐಫೋನ್-12 (ಪ್ರಥಮ), ಸ್ಯಾಮ್ಸಂಗ್ ಗ್ಯಾಲಕ್ಸಿ ಎ-51 (ದ್ವಿತೀಯ), ಗ್ಯಾಲಕ್ಸಿಎ21 (ತೃತೀಯ) ಹಾಗೂ ಟ್ಯಾಬ್(ನಾಲ್ಕನೇ ಬಹುಮಾನ) ನೀಡಲಾಗುವುದು’ ಎಂದು ನಲಪಾಡ್ ತಿಳಿಸಿದರು.</p>.<p class="Subhead"><strong>ಮಾಹಿತಿಗೆ: 9999835988</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>