<p><strong>ಬೆಂಗಳೂರು</strong>: ಸಾಹಿತಿ ಹಾಗೂ ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರಗಳು ಬಂದಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದಾರೆ. ಎಸಿಪಿ ನೇತೃತ್ವದ ತಂಡ, ಹಲವು ಪುರಾವೆ ಸಂಗ್ರಹಿಸಿ ಆರೋಪಿಗಳನ್ನು ಪತ್ತೆ ಮಾಡುತ್ತಿದ್ದಾರೆ.</p>.<p>ಸಾಹಿತಿಗಳಾದ ಕುಂ. ವೀರಭದ್ರಪ್ಪ, ಬಿ.ಎಲ್. ವೇಣು, ಬಂಜಗೆರೆ ಜಯಪ್ರಕಾಶ್, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ ಸೇರಿದಂತೆ ಹಲವರಿಗೆ ಬೆದರಿಕೆ ಪತ್ರಗಳು ಬಂದಿದ್ದವು. ಈ ಬಗ್ಗೆ ದಾಖಲಾಗಿದ್ದ ಪ್ರಕರಣಗಳ ತನಿಖೆಯನ್ನು ಸಿಸಿಬಿಗೆ ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಅಲೋಕ್ ಮೋಹನ್ ಇತ್ತೀಚೆಗೆ ಆದೇಶ ಹೊರಡಿಸಿದ್ದರು.</p>.<p><strong>ದಾವಣಗೆರೆಯಲ್ಲಿ ಶೋಧ:</strong> ಕೊಟ್ಟೂರು, ಚಿತ್ರದುರ್ಗ, ಹಾರೋಹಳ್ಳಿ, ಬೆಂಗಳೂರಿನ ಸಂಜಯನಗರ ಹಾಗೂ ಬಸವೇಶ್ವರನಗರ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ಕಡತಗಳನ್ನು ಸಿಸಿಬಿ ಪೊಲೀಸರು ಈಗಾಗಲೇ ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ.</p>.<p>‘ಬೆದರಿಕೆ ಪತ್ರಗಳನ್ನು ಪರಿಶೀಲಿಸಲಾಗುತ್ತಿದೆ. ದಾವಣಗೆರೆಯಲ್ಲಿರುವ ಆರೋಪಿಯೊಬ್ಬ, ಬೆದರಿಕೆ ಪತ್ರ ಕಳುಹಿಸಿರುವ ಮಾಹಿತಿ ಇದೆ. ಹೀಗಾಗಿ, ದಾವಣಗೆರೆಯಲ್ಲಿ ಶೋಧ ನಡೆಸಲಾಗುತ್ತಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<p>‘ದಾವಣಗೆರೆಯ ಅಕ್ಕ–ಪಕ್ಕದಲ್ಲಿರುವ ರಾಣೆಬೆನ್ನೂರು, ಹರಿಹರ ಹಾಗೂ ಇತರೆ ನಗರಗಳ ಅಂಚೆ ಕಚೇರಿಗಳ ಮೂಲಕ ಪತ್ರಗಳು ಬಂದಿವೆ. ದಾವಣಗೆರೆಯಲ್ಲಿರುವ ಆರೋಪಿ, ತನ್ನ ಸುಳಿವು ಸಿಗಬಾರದೆಂದು ಬೇರೆಡೆ ಹೋಗಿ ಪತ್ರ ಕಳುಹಿಸಿರುವ ಅನುಮಾನವಿದೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಾಹಿತಿ ಹಾಗೂ ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರಗಳು ಬಂದಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದಾರೆ. ಎಸಿಪಿ ನೇತೃತ್ವದ ತಂಡ, ಹಲವು ಪುರಾವೆ ಸಂಗ್ರಹಿಸಿ ಆರೋಪಿಗಳನ್ನು ಪತ್ತೆ ಮಾಡುತ್ತಿದ್ದಾರೆ.</p>.<p>ಸಾಹಿತಿಗಳಾದ ಕುಂ. ವೀರಭದ್ರಪ್ಪ, ಬಿ.ಎಲ್. ವೇಣು, ಬಂಜಗೆರೆ ಜಯಪ್ರಕಾಶ್, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ ಸೇರಿದಂತೆ ಹಲವರಿಗೆ ಬೆದರಿಕೆ ಪತ್ರಗಳು ಬಂದಿದ್ದವು. ಈ ಬಗ್ಗೆ ದಾಖಲಾಗಿದ್ದ ಪ್ರಕರಣಗಳ ತನಿಖೆಯನ್ನು ಸಿಸಿಬಿಗೆ ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಅಲೋಕ್ ಮೋಹನ್ ಇತ್ತೀಚೆಗೆ ಆದೇಶ ಹೊರಡಿಸಿದ್ದರು.</p>.<p><strong>ದಾವಣಗೆರೆಯಲ್ಲಿ ಶೋಧ:</strong> ಕೊಟ್ಟೂರು, ಚಿತ್ರದುರ್ಗ, ಹಾರೋಹಳ್ಳಿ, ಬೆಂಗಳೂರಿನ ಸಂಜಯನಗರ ಹಾಗೂ ಬಸವೇಶ್ವರನಗರ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ಕಡತಗಳನ್ನು ಸಿಸಿಬಿ ಪೊಲೀಸರು ಈಗಾಗಲೇ ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ.</p>.<p>‘ಬೆದರಿಕೆ ಪತ್ರಗಳನ್ನು ಪರಿಶೀಲಿಸಲಾಗುತ್ತಿದೆ. ದಾವಣಗೆರೆಯಲ್ಲಿರುವ ಆರೋಪಿಯೊಬ್ಬ, ಬೆದರಿಕೆ ಪತ್ರ ಕಳುಹಿಸಿರುವ ಮಾಹಿತಿ ಇದೆ. ಹೀಗಾಗಿ, ದಾವಣಗೆರೆಯಲ್ಲಿ ಶೋಧ ನಡೆಸಲಾಗುತ್ತಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.</p>.<p>‘ದಾವಣಗೆರೆಯ ಅಕ್ಕ–ಪಕ್ಕದಲ್ಲಿರುವ ರಾಣೆಬೆನ್ನೂರು, ಹರಿಹರ ಹಾಗೂ ಇತರೆ ನಗರಗಳ ಅಂಚೆ ಕಚೇರಿಗಳ ಮೂಲಕ ಪತ್ರಗಳು ಬಂದಿವೆ. ದಾವಣಗೆರೆಯಲ್ಲಿರುವ ಆರೋಪಿ, ತನ್ನ ಸುಳಿವು ಸಿಗಬಾರದೆಂದು ಬೇರೆಡೆ ಹೋಗಿ ಪತ್ರ ಕಳುಹಿಸಿರುವ ಅನುಮಾನವಿದೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>