<p><strong>ಬೆಂಗಳೂರು</strong>: ಜಾರ್ಖಂಡ್ ಮಾದರಿಯಲ್ಲಿ ಕೇಂದ್ರ ಸರ್ಕಾರದಿಂದ ಖನಿಜ ಸಮೃದ್ಧ ಜಮೀನುಗಳ ಮೇಲಿನ ರಾಜಧನದ ಹಿಂದಿನ ಬಾಕಿ ಪಡೆಯುವಂತೆ ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.</p><p>ರಾಜಧನದ ಹಿಂದಿನ ಬಾಕಿಯನ್ನು ವಸೂಲಿ ಮಾಡಲು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಅನುಮತಿ ನೀಡಿರುವುದು ಕರ್ನಾಟಕದ ಪಾಲಿಗೆ ವರದಾನವಾಗಿದೆ. ಇದರಿಂದ ರಾಜ್ಯಕ್ಕೆ ಭಾರಿ ಮೊತ್ತದ ಬಾಕಿ ರಾಜಧನ ಸಿಗಲಿದೆ. ಈ ಬಾಕಿ ಹಣವನ್ನು ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.</p><p>ಕೋರ್ಟ್ ತೀರ್ಪಿನ ನಂತರ ಜಾರ್ಖಂಡ್ಗೆ ₹ 1.36 ಲಕ್ಷ ಕೋಟಿ ಬಾಕಿ ಬರಲಿದೆ. ಈ ಹಣದಲ್ಲಿ ಜಾರ್ಖಂಡ್ ಅಭಿವೃದ್ಧಿ ಹಾಗೂ ರಾಜ್ಯದ ಕಲ್ಯಾಣಕ್ಕೆ ವಿನಿಯೋಗಿಸುವುದಾಗಿ ಅಲ್ಲಿನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ. ಇದೇ ಮಾದರಿಯಲ್ಲಿ ಕರ್ನಾಟಕದ ಪಾಲಿಗೆ ಬರಬೇಕಿರುವ ಮೊತ್ತವನ್ನು ಕೇಂದ್ರದಿಂದ ಪಡೆಯಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಾರ್ಖಂಡ್ ಮಾದರಿಯಲ್ಲಿ ಕೇಂದ್ರ ಸರ್ಕಾರದಿಂದ ಖನಿಜ ಸಮೃದ್ಧ ಜಮೀನುಗಳ ಮೇಲಿನ ರಾಜಧನದ ಹಿಂದಿನ ಬಾಕಿ ಪಡೆಯುವಂತೆ ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.</p><p>ರಾಜಧನದ ಹಿಂದಿನ ಬಾಕಿಯನ್ನು ವಸೂಲಿ ಮಾಡಲು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಅನುಮತಿ ನೀಡಿರುವುದು ಕರ್ನಾಟಕದ ಪಾಲಿಗೆ ವರದಾನವಾಗಿದೆ. ಇದರಿಂದ ರಾಜ್ಯಕ್ಕೆ ಭಾರಿ ಮೊತ್ತದ ಬಾಕಿ ರಾಜಧನ ಸಿಗಲಿದೆ. ಈ ಬಾಕಿ ಹಣವನ್ನು ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.</p><p>ಕೋರ್ಟ್ ತೀರ್ಪಿನ ನಂತರ ಜಾರ್ಖಂಡ್ಗೆ ₹ 1.36 ಲಕ್ಷ ಕೋಟಿ ಬಾಕಿ ಬರಲಿದೆ. ಈ ಹಣದಲ್ಲಿ ಜಾರ್ಖಂಡ್ ಅಭಿವೃದ್ಧಿ ಹಾಗೂ ರಾಜ್ಯದ ಕಲ್ಯಾಣಕ್ಕೆ ವಿನಿಯೋಗಿಸುವುದಾಗಿ ಅಲ್ಲಿನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ. ಇದೇ ಮಾದರಿಯಲ್ಲಿ ಕರ್ನಾಟಕದ ಪಾಲಿಗೆ ಬರಬೇಕಿರುವ ಮೊತ್ತವನ್ನು ಕೇಂದ್ರದಿಂದ ಪಡೆಯಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>