‘ಶೇ 25 ಸೀಟು ಮೀಸಲಿಡುವಂತೆ ಕಳೆದ ಸಂಸತ್ ಅಧಿವೇಶನದಲ್ಲಿ ನಾನು ಒತ್ತಾಯಿಸಿದ್ದೆ. ಶಿಕ್ಷಣ ವ್ಯವಸ್ಥೆ ಇತ್ತೀಚೆಗೆ ಕೇಂದ್ರೀಕರಣವಾಗುತ್ತಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮಾರಕ. ಐಐಟಿ, ಐಐಎಂ, ಏಮ್ಸ್, ಎನ್ಐಡಿ, ಐಐಐಡಿ, ಐಸಿಎಆರ್ ಮತ್ತಿತರ ಕೋರ್ಸ್ಗಳ ಪ್ರವೇಶಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಪರೀಕ್ಷೆಗಳು ನಡೆಯುವುದರಿಂದ ನಗರ ಪ್ರದೇಶದ ವಿದ್ಯಾರ್ಥಿಗಳ ಜತೆ ಹಳ್ಳಿಯ ವಿದ್ಯಾರ್ಥಿಗಳಿಗೆ ಸ್ಪರ್ಧಿಸಲು ಕಷ್ಟವಾಗುತ್ತಿದೆ. ಹೀಗಾಗಿ ಅವಕಾಶ ವಂಚಿತರಾಗುತ್ತಿದ್ದಾರೆ’ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.