ಬೆಂಗಳೂರು: ₹ 20 ಕೋಟಿ ಮೌಲ್ಯದ ಪುಸ್ತಕಗಳನ್ನು ಖರೀದಿಸಿ, ಗ್ರಂಥಾಲಯಗಳಿಗೆ ರವಾನಿಸದೇ ಇರುವುದು, ಮಂಜೂರಾತಿಗಿಂತ ಹೆಚ್ಚು ಮೊತ್ತದ ಪುಸ್ತಕ ಖರೀದಿ, ಟೆಂಡರ್ಗಳಲ್ಲಿ ಅಕ್ರಮ ಸೇರಿದಂತೆ ಹಲವು ಆರೋಪಗಳ ಮೇಲೆ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ ಕುಮಾರ್ ಎಸ್. ಹೊಸಮನಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.