ಈ ಸಪ್ತಾಹದ ಭಾಗವಾಗಿ ಮಕ್ಕಳು, ಯುವಜನತೆ, ಹಿರಿಯ ನಾಗರಿಕರು ಸೇರಿದಂತೆ ವಿವಿಧ ವರ್ಗದವರಿಗೆ ಚಿತ್ರಕಲೆ, ಪ್ರಬಂಧ, ಭಕ್ತಿಗೀತೆ, ಭಾವಗೀತೆ, ಜಾನಪದಗೀತೆ, ಚಿತ್ರಗೀತೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುತ್ತದೆ. ಇದೇ 16ರಂದು ಬೆಳಿಗ್ಗೆ 10 ಗಂಟೆಗೆ ಜ್ಞಾನ ಪ್ರಸರಣ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.