ಬಂಧಿತನನ್ನು ಎಸ್.ಎ. ಸಯೀದ್ ಶಾಕ್ರಾ ಎಂದು ಗುರುತಿಸಲಾಗಿದೆ. ಇವರು ಕಮ್ಮನಹಳ್ಳಿ ಎ.ಕೆ ಕಾಲೋನಿಯಲ್ಲಿ ವಾಸವಾಗಿದ್ದರು. ತಮ್ಮ ಸರಹದ್ದಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಗೆ ನಿಯೋಜನೆಗೊಂಡಿರುವ ಬಾಣಸವಾಡಿ ಠಾಣೆ ಹೆಡ್ ಕಾನ್ಸ್ಟೆಬಲ್ ವೆಂಕಟೇಶ್ ಬಿ.ಎಂ. ಈ ಸಂಬಂಧ ದೂರು ನೀಡಿದ್ದಾರೆ.