‘ಅಪರಾಧಿ ವಿಪರೀತವಾಗಿ ಮದ್ಯ ಸೇವಿಸುತ್ತಿದ್ದ. ಕುಡಿತದ ಚಟಕ್ಕೆ ಹಣ ನೀಡುವಂತೆ ತಾಯಿ ಬಳಿ ಬಲವಂತ ಮಾಡುತ್ತಿದ್ದ. ಹಣ ಕೊಡದಿದ್ದರೆ ಮದುವೆ ಮಾಡು ಎಂದು ಪೀಡಿಸುತ್ತಿದ್ದ. ಅದಾದ ಮೇಲೆ ಮನೆ ಮಾರಾಟ ಮಾಡುವಂತೆ ಒತ್ತಾಯ ಹೇರುತ್ತಿದ್ದ. ನನ್ನ ಉಸಿರು ನಿಂತರೂ ಮನೆ ಮಾರಾಟ ಮಾಡುವುದಿಲ್ಲ ಎಂದು ತಾಯಿ ಹೇಳಿದ್ದರು. ಶಾಶ್ವತವಾಗಿಯೇ ಉಸಿರು ನಿಲ್ಲಿಸುತ್ತೇನೆ ಎಂದು ಹೇಳಿದ್ದ ಅಪರಾಧಿ, 2018ರ ಜೂನ್ 13ರಂದು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಅದಾದ ಮೇಲೆ ಕೊಲೆ ಮಾಡಿಲ್ಲ ಎಂದು ನಾಟಕವಾಡಿದ್ದ’ ಎಂದು ಮೂಲಗಳು ಹೇಳಿವೆ.