<p><strong>ಬೆಂಗಳೂರು</strong>: ಬೆಂಗಳೂರು ರೌಂಡ್ ಟೇಬಲ್ 7 ಸಂಸ್ಥೆ ಹಮ್ಮಿಕೊಂಡಿರುವ ಕೃತಕ ಕಾಲು ಮತ್ತು ಕೈ ಅಳವಡಿಕೆಯ ಕಾರ್ಯಕ್ರಮಕ್ಕೆ ನಗರದಲ್ಲಿ ಶನಿವಾರ ಚಾಲನೆ ದೊರೆಯಿತು. </p>.<p>ಬೆಂಗಳೂರು ಲೇಡೀಸ್ ಸರ್ಕಲ್ 19 ಮತ್ತು ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಷನ್ (ಕೆಎಂವೈಎಫ್) ಸಹಯೋಗದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ, ಸಂಸ್ಥೆಯು ಈ ವರ್ಷ ₹ 30 ಲಕ್ಷ ಹಣವನ್ನು ದಾನಿಗಳಿಂದ ಸಂಗ್ರಹಿಸಿದೆ. ಈ ಹಣದಲ್ಲಿ ಮಿಲ್ಲರ್ಸ್ ರಸ್ತೆಯಲ್ಲಿರುವ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಕೃತಕ ಕಾಲು ಮತ್ತು ಕೈ ಅಳವಡಿಸಲಾಗುತ್ತಿದ್ದು, ಈ ವರ್ಷ ಸಾವಿರ ಕೃತಕ ಅಂಗಗಳು ಮತ್ತು ನೂರು ಕೈಗಳನ್ನು ಉಚಿತವಾಗಿ ಒದಗಿಸುವುದಾಗಿ ಘೋಷಿಸಿದೆ.</p>.<p>ಬೆಂಗಳೂರು ರೌಂಡ್ ಟೇಬಲ್ 7ರ ಅಧ್ಯಕ್ಷ ಅಭಿಷೇಕ್ ಅಹುಜಾ, ‘ದಶಕಗಳಿಂದ ಈ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು, 47 ವರ್ಷಗಳಲ್ಲಿ ಆರು ಸಾವಿರ ಕೃತಕ ಅಂಗಾಂಗಗಳನ್ನು ಅಳವಡಿಸಲಾಗಿದೆ. ಪ್ರತಿಯೊಂದು ಕೃತಕ ಕೈಗಳನ್ನು ₹5 ಸಾವಿರ ವೆಚ್ಚದಲ್ಲಿ ತಯಾರಿಸಲಾಗುತ್ತದೆ. ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯು ಅರ್ಹರಿಗೆ ಕೃತಕ ಅಂಗಗಳನ್ನು ಅಳವಡಿಸುತ್ತದೆ’ ಎಂದು ಹೇಳಿದರು.</p>.<p>ಬೆಂಗಳೂರು ಲೇಡೀಸ್ ಸರ್ಕಲ್ 19ರ ಅಧ್ಯಕ್ಷೆ ನತಾಶಾ ಅಹುಜಾ, ‘ಕೃತಕ ತೋಳುಗಳನ್ನು ನೀಡುವುದರಿಂದ ಬದುಕಿನಲ್ಲಿ ಹೊಸ ಭರವಸೆ ಮೂಡಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ರೌಂಡ್ ಟೇಬಲ್ 7 ಸಂಸ್ಥೆ ಹಮ್ಮಿಕೊಂಡಿರುವ ಕೃತಕ ಕಾಲು ಮತ್ತು ಕೈ ಅಳವಡಿಕೆಯ ಕಾರ್ಯಕ್ರಮಕ್ಕೆ ನಗರದಲ್ಲಿ ಶನಿವಾರ ಚಾಲನೆ ದೊರೆಯಿತು. </p>.<p>ಬೆಂಗಳೂರು ಲೇಡೀಸ್ ಸರ್ಕಲ್ 19 ಮತ್ತು ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಷನ್ (ಕೆಎಂವೈಎಫ್) ಸಹಯೋಗದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ, ಸಂಸ್ಥೆಯು ಈ ವರ್ಷ ₹ 30 ಲಕ್ಷ ಹಣವನ್ನು ದಾನಿಗಳಿಂದ ಸಂಗ್ರಹಿಸಿದೆ. ಈ ಹಣದಲ್ಲಿ ಮಿಲ್ಲರ್ಸ್ ರಸ್ತೆಯಲ್ಲಿರುವ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಕೃತಕ ಕಾಲು ಮತ್ತು ಕೈ ಅಳವಡಿಸಲಾಗುತ್ತಿದ್ದು, ಈ ವರ್ಷ ಸಾವಿರ ಕೃತಕ ಅಂಗಗಳು ಮತ್ತು ನೂರು ಕೈಗಳನ್ನು ಉಚಿತವಾಗಿ ಒದಗಿಸುವುದಾಗಿ ಘೋಷಿಸಿದೆ.</p>.<p>ಬೆಂಗಳೂರು ರೌಂಡ್ ಟೇಬಲ್ 7ರ ಅಧ್ಯಕ್ಷ ಅಭಿಷೇಕ್ ಅಹುಜಾ, ‘ದಶಕಗಳಿಂದ ಈ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು, 47 ವರ್ಷಗಳಲ್ಲಿ ಆರು ಸಾವಿರ ಕೃತಕ ಅಂಗಾಂಗಗಳನ್ನು ಅಳವಡಿಸಲಾಗಿದೆ. ಪ್ರತಿಯೊಂದು ಕೃತಕ ಕೈಗಳನ್ನು ₹5 ಸಾವಿರ ವೆಚ್ಚದಲ್ಲಿ ತಯಾರಿಸಲಾಗುತ್ತದೆ. ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯು ಅರ್ಹರಿಗೆ ಕೃತಕ ಅಂಗಗಳನ್ನು ಅಳವಡಿಸುತ್ತದೆ’ ಎಂದು ಹೇಳಿದರು.</p>.<p>ಬೆಂಗಳೂರು ಲೇಡೀಸ್ ಸರ್ಕಲ್ 19ರ ಅಧ್ಯಕ್ಷೆ ನತಾಶಾ ಅಹುಜಾ, ‘ಕೃತಕ ತೋಳುಗಳನ್ನು ನೀಡುವುದರಿಂದ ಬದುಕಿನಲ್ಲಿ ಹೊಸ ಭರವಸೆ ಮೂಡಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>