ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹದೇವಪುರ ಕ್ಷೇತ್ರದ ಎಎಪಿ ಅಧ್ಯಕ್ಷ ಅಶೋಕ್ ಮೃತ್ಯುಂಜಯ, ಕಸವನಹಳ್ಳಿ ವೃತ್ತದಲ್ಲಿ ಕಟ್ಟಡವೊಂದನ್ನು ಲೀಸ್ಗೆ ಪಡೆದು, ಅಲ್ಲಿ ಬೆಳ್ಳಂದೂರು ವಾರ್ಡ್ ಕಚೇರಿಯನ್ನು ಭಾನುವಾರ ಆರಂಭಿಸಿದ್ದರು. ವಿಷಯ ತಿಳಿದೊಡನೆಯೇ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ, ಮಾಲೀಕರಿಗೆ ಬೆದರಿಕೆ ಹಾಕಿದ್ದಾರೆ. ಕಚೇರಿ ಖಾಲಿ ಮಾಡಿಸದಿದ್ದರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿ
ದ್ದಾರೆ. ನಾವು ಕಚೇರಿ ಶುರುಮಾಡಿದರೆ ಶಾಸಕರಿಗೇಕೆ ಭಯ. ಅವರೇಕೆಹತಾಶರಾಗಿದ್ದಾರೆ. ಅವರ ನಡವಳಿಕೆ ಖಂಡನಾರ್ಹ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ’ ಎಂದರು.