<p><strong>ಬೆಂಗಳೂರು:</strong> ‘ಒಂದೆಡೆ ಮದ್ಯ ಪೂರೈಕೆಗೆ ಅನುಮತಿ ನೀಡಿ, ಮತ್ತೊಂದೆಡೆ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹೆಸರಿನಲ್ಲಿ ಎರಡು ಟ್ರಕ್ ಗಳಲ್ಲಿದ್ದ ಮದ್ಯ ವಶಕ್ಕೆ ತೆಗೆದುಕೊಂಡಿದ್ದು ಎಷ್ಟರಮಟ್ಟಿಗೆ ಸರಿ’ ಎಂದು ಪ್ರಶ್ನಿಸಿರುವ ಹೈಕೋರ್ಟ್, ಈ ಸಂಬಂಧ ‘ಕಲ್ಪತರು ಬ್ರಿವರೀಸ್ ಆ್ಯಂಡ್ ಡಿಸ್ಟಿಲರೀಸ್ ಸಂಸ್ಥೆ’ ವಿರುದ್ಧ ದಾಖಲಿಸಲಾಗಿದ್ದ ಎರಡು ಎಫ್ಐಆರ್ಗಳನ್ನು ರದ್ದುಪಡಿಸಿದೆ.</p>.<p>ಎರಡು ಟ್ರಕ್ ಗಳಲ್ಲಿದ್ದ ಮದ್ಯ ವಶಪಡಿಸಿಕೊಂಡು, ಎಫ್ಐಆರ್ ದಾಖಲಿಸಿದ್ದನ್ನು ಪ್ರಶ್ನಿಸಿ, ‘ಕಲ್ಪತರು ಬ್ರಿವರೀಸ್ ಆ್ಯಂಡ್ ಡಿಸ್ಟಿಲರೀಸ್ ಸಂಸ್ಥೆ’ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.</p>.<p>‘ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ, ಕರ್ನಾಟಕ ರಾಜ್ಯ ಪಾನೀಯ ನಿಗಮವು (ಕೆಎಸ್ ಬಿಸಿಎಲ್) ಮದ್ಯ ಪೂರೈಸಲು ಏಕೆ ಅನುಮತಿ ನೀಡಬೇಕಿತ್ತು’ ಎಂದು ನ್ಯಾಯಪೀಠ ಪ್ರಶ್ನಿಸಿದೆ.</p>.<p>‘ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಮದ್ಯ ಸಾಗಣೆಗೆ ಅಬಕಾರಿ ಇಲಾಖೆಯೇ ಪರವಾನಗಿ ನೀಡಿದೆ. ಮತ್ತು ಅದೇ ಇಲಾಖೆಯ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಕಾರಣದಡಿ ಎರಡು ಟ್ರಕ್ಗಳಲ್ಲಿ ತುಂಬಿದ್ದ ಮದ್ಯ ವಶಪಡಿಸಿಕೊಂಡಿರುವುದು ಕಾನೂನಿನ ದುರ್ಬಳಕೆಯಾಗಿದೆ’ ಎಂದು ಅಭಿಪ್ರಾಯಪಟ್ಟಿದೆ.</p>.<p>‘ಅರ್ಜಿದಾರರು ಸರಕುಪಟ್ಟಿ (ಇನ್ವಾಯ್ಸ್) ಮತ್ತು ಅಗತ್ಯ ಪರವಾನಗಿ ಹೊಂದಿರುವುದರಿಂದ, ಕರ್ನಾಟಕ ಅಬಕಾರಿ ಕಾಯ್ದೆ- 1965ರ ಕಲಂ 32 ಹಾಗೂ 34ರಡಿ ಅಪರಾಧವಲ್ಲ. ಮೇಲ್ನೋಟಕ್ಕೆ ಇದು ಚುನಾವಣಾ ನೀತಿ ಸಂಹಿತೆ ಹೆಸರಿನಲ್ಲಿ ಇಲಾಖೆ ಮಾಡಿರುವ ಕಾನೂನಿನ ದುರುಪಯೋಗ’ ಎಂದು ಹೇಳಿದೆ.</p>.<p><strong>ಪ್ರಕರಣವೇನು?:</strong> ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆಯ, ಸೋಂಪುರದಲ್ಲಿರುವ ‘ಕಲ್ಪತರು ಬ್ರಿವರೀಸ್ ಅಂಡ್ ಡಿಸ್ಟಿಲರೀಸ್ ಸಂಸ್ಥೆ’ಗೆ ವಿಸ್ಕಿ, ಬಿಯರ್ ಮತ್ತಿತರ ಮದ್ಯಗಳನ್ನು ಕೆಎಸ್ಬಿಸಿಎಲ್ಗೆ ಪೂರೈಸಲು ಅಬಕಾರಿ ಇಲಾಖೆ ಅನುಮೋದನೆ ನೀಡಿತ್ತು.</p>.<p>ಈ ನಿಟ್ಟಿನಲ್ಲಿ ಮಾರ್ಚ್ 16ಂದು ಅಬಕಾರಿ ಇಲಾಖೆ ಪರವಾನಗಿ ನೀಡಿತ್ತು. ಅದರ ಅವಧಿ ಮಾರ್ಚ್ 22ರವರೆಗೆ ಅಸ್ತಿತ್ವದಲ್ಲಿತ್ತು. ಆದರೆ, ಮಾರ್ಚ್ 18ರಂದು ಎರಡು ಟ್ರಕ್ಗಳಲ್ಲಿ ಸಾಗಣೆಗಾಗಿ ಭರ್ತಿ ಮಾಡಲಾಗಿದ್ದ ತಲಾ ₹ 26 ಲಕ್ಷ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿತ್ತು. ಕಂಪನಿಯ ಆವರಣದಲ್ಲಿ ಸಾಗಣೆಗಾಗಿ ನಿಲ್ಲಿಸಿದ್ದ ಈ ಟ್ರಕ್ ಗಳನ್ನು ಜಪ್ತಿ ಮಾಡಿದ್ದ ಅಬಕಾರಿ ನಿರೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ 32 (ಅಕ್ರಮ ಮದ್ಯ ಸಾಗಣೆ) ಮತ್ತು ಕಲಂ 34ರ (ಅಕ್ರಮ ಮದ್ಯ ಸಂಗ್ರಹ) ಆರೋಪದಡಿ ಎರಡು ಎಫ್ಐಆರ್ ದಾಖಲಿಸಿದ್ದರು.</p>.<p>‘ಅಬಕಾರಿ ಅಧಿಕಾರಿಗಳ ಈ ಕ್ರಮ ಕಾನೂನು ಬಾಹಿರ’ ಎಂದು ಆಕ್ಷೇಪಿಸಿದ್ದ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಒಂದೆಡೆ ಮದ್ಯ ಪೂರೈಕೆಗೆ ಅನುಮತಿ ನೀಡಿ, ಮತ್ತೊಂದೆಡೆ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹೆಸರಿನಲ್ಲಿ ಎರಡು ಟ್ರಕ್ ಗಳಲ್ಲಿದ್ದ ಮದ್ಯ ವಶಕ್ಕೆ ತೆಗೆದುಕೊಂಡಿದ್ದು ಎಷ್ಟರಮಟ್ಟಿಗೆ ಸರಿ’ ಎಂದು ಪ್ರಶ್ನಿಸಿರುವ ಹೈಕೋರ್ಟ್, ಈ ಸಂಬಂಧ ‘ಕಲ್ಪತರು ಬ್ರಿವರೀಸ್ ಆ್ಯಂಡ್ ಡಿಸ್ಟಿಲರೀಸ್ ಸಂಸ್ಥೆ’ ವಿರುದ್ಧ ದಾಖಲಿಸಲಾಗಿದ್ದ ಎರಡು ಎಫ್ಐಆರ್ಗಳನ್ನು ರದ್ದುಪಡಿಸಿದೆ.</p>.<p>ಎರಡು ಟ್ರಕ್ ಗಳಲ್ಲಿದ್ದ ಮದ್ಯ ವಶಪಡಿಸಿಕೊಂಡು, ಎಫ್ಐಆರ್ ದಾಖಲಿಸಿದ್ದನ್ನು ಪ್ರಶ್ನಿಸಿ, ‘ಕಲ್ಪತರು ಬ್ರಿವರೀಸ್ ಆ್ಯಂಡ್ ಡಿಸ್ಟಿಲರೀಸ್ ಸಂಸ್ಥೆ’ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.</p>.<p>‘ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ, ಕರ್ನಾಟಕ ರಾಜ್ಯ ಪಾನೀಯ ನಿಗಮವು (ಕೆಎಸ್ ಬಿಸಿಎಲ್) ಮದ್ಯ ಪೂರೈಸಲು ಏಕೆ ಅನುಮತಿ ನೀಡಬೇಕಿತ್ತು’ ಎಂದು ನ್ಯಾಯಪೀಠ ಪ್ರಶ್ನಿಸಿದೆ.</p>.<p>‘ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಮದ್ಯ ಸಾಗಣೆಗೆ ಅಬಕಾರಿ ಇಲಾಖೆಯೇ ಪರವಾನಗಿ ನೀಡಿದೆ. ಮತ್ತು ಅದೇ ಇಲಾಖೆಯ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಕಾರಣದಡಿ ಎರಡು ಟ್ರಕ್ಗಳಲ್ಲಿ ತುಂಬಿದ್ದ ಮದ್ಯ ವಶಪಡಿಸಿಕೊಂಡಿರುವುದು ಕಾನೂನಿನ ದುರ್ಬಳಕೆಯಾಗಿದೆ’ ಎಂದು ಅಭಿಪ್ರಾಯಪಟ್ಟಿದೆ.</p>.<p>‘ಅರ್ಜಿದಾರರು ಸರಕುಪಟ್ಟಿ (ಇನ್ವಾಯ್ಸ್) ಮತ್ತು ಅಗತ್ಯ ಪರವಾನಗಿ ಹೊಂದಿರುವುದರಿಂದ, ಕರ್ನಾಟಕ ಅಬಕಾರಿ ಕಾಯ್ದೆ- 1965ರ ಕಲಂ 32 ಹಾಗೂ 34ರಡಿ ಅಪರಾಧವಲ್ಲ. ಮೇಲ್ನೋಟಕ್ಕೆ ಇದು ಚುನಾವಣಾ ನೀತಿ ಸಂಹಿತೆ ಹೆಸರಿನಲ್ಲಿ ಇಲಾಖೆ ಮಾಡಿರುವ ಕಾನೂನಿನ ದುರುಪಯೋಗ’ ಎಂದು ಹೇಳಿದೆ.</p>.<p><strong>ಪ್ರಕರಣವೇನು?:</strong> ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆಯ, ಸೋಂಪುರದಲ್ಲಿರುವ ‘ಕಲ್ಪತರು ಬ್ರಿವರೀಸ್ ಅಂಡ್ ಡಿಸ್ಟಿಲರೀಸ್ ಸಂಸ್ಥೆ’ಗೆ ವಿಸ್ಕಿ, ಬಿಯರ್ ಮತ್ತಿತರ ಮದ್ಯಗಳನ್ನು ಕೆಎಸ್ಬಿಸಿಎಲ್ಗೆ ಪೂರೈಸಲು ಅಬಕಾರಿ ಇಲಾಖೆ ಅನುಮೋದನೆ ನೀಡಿತ್ತು.</p>.<p>ಈ ನಿಟ್ಟಿನಲ್ಲಿ ಮಾರ್ಚ್ 16ಂದು ಅಬಕಾರಿ ಇಲಾಖೆ ಪರವಾನಗಿ ನೀಡಿತ್ತು. ಅದರ ಅವಧಿ ಮಾರ್ಚ್ 22ರವರೆಗೆ ಅಸ್ತಿತ್ವದಲ್ಲಿತ್ತು. ಆದರೆ, ಮಾರ್ಚ್ 18ರಂದು ಎರಡು ಟ್ರಕ್ಗಳಲ್ಲಿ ಸಾಗಣೆಗಾಗಿ ಭರ್ತಿ ಮಾಡಲಾಗಿದ್ದ ತಲಾ ₹ 26 ಲಕ್ಷ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿತ್ತು. ಕಂಪನಿಯ ಆವರಣದಲ್ಲಿ ಸಾಗಣೆಗಾಗಿ ನಿಲ್ಲಿಸಿದ್ದ ಈ ಟ್ರಕ್ ಗಳನ್ನು ಜಪ್ತಿ ಮಾಡಿದ್ದ ಅಬಕಾರಿ ನಿರೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ 32 (ಅಕ್ರಮ ಮದ್ಯ ಸಾಗಣೆ) ಮತ್ತು ಕಲಂ 34ರ (ಅಕ್ರಮ ಮದ್ಯ ಸಂಗ್ರಹ) ಆರೋಪದಡಿ ಎರಡು ಎಫ್ಐಆರ್ ದಾಖಲಿಸಿದ್ದರು.</p>.<p>‘ಅಬಕಾರಿ ಅಧಿಕಾರಿಗಳ ಈ ಕ್ರಮ ಕಾನೂನು ಬಾಹಿರ’ ಎಂದು ಆಕ್ಷೇಪಿಸಿದ್ದ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>