‘ಒಂದು ಕಾಲದಲ್ಲಿ ಸಿನಿಮಾ ಕ್ಷೇತ್ರವನ್ನುಅಸ್ಪೃಶ್ಯರ ಕ್ಷೇತ್ರವೆಂದು ಭಾವಿಸಲಾಗಿತ್ತು. ಇದರಿಂದಾಗಿ ಆ ಕ್ಷೇತ್ರದಿಂದ ಲೇಖಕರು ಹಾಗೂ ಸಾಹಿ ತಿಗಳು ಅಂತರ ಕಾಯ್ದುಕೊಳ್ಳುತ್ತಿದ್ದರು. ಆದರೆ, ಈಗ ಸಿನಿಮಾ ಕ್ಷೇತ್ರದಲ್ಲಿ ಆ ಪರಿಸ್ಥಿತಿಯಿಲ್ಲ.ಸಾಹಿತ್ಯ ಕ್ಷೇತ್ರದ ದಿಗ್ಗಜರಾದ ದ.ರಾ. ಬೇಂದ್ರೆ, ಅ.ನ. ಕೃಷ್ಣರಾಯ, ಶಿವರಾಮ ಕಾರಂತ ಸೇರಿ ಹಲವರು ಚನಲಚಿತ್ರ ಗೀತೆಗಳಿಗೆ ಸಾಹಿತ್ಯ ಬರೆದಿದ್ದಾರೆ.ಸಂಗೀತ ಕ್ಷೇತ್ರದ ಸಾಧಕರಾದ ಪಂಡಿತ ಬಸವರಾಜ ರಾಜಗುರು, ಪಿಟೀಲು ಚೌಡಯ್ಯಸೇರಿ ಕೆಲವರು ಸಿನಿಮಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದಾರೆ’ ಎಂದರು.