ಬೆಂಗಳೂರು: ಬೆಂಗೂರು ನಗರ ವ್ಯಾಪ್ತಿಯಲ್ಲಿ ಲೈವ್ ಬ್ಯಾಂಡ್ ನಡೆಸುವ ಬಾರ್ ಅಂಡ್ ರೆಸ್ಟೊರೆಂಟ್ಗಳು ಅಧಿಭೋಗ ಪ್ರಮಾಣ ಪತ್ರ (ಅಕ್ಯುಪೆನ್ಸಿ ಸರ್ಟಿಫಿಕೇಟ್) ಪಡೆಯಬೇಕು ಎಂದು ನಗರ ಪೊಲೀಸ್ ಕಮಿಷನರ್ ನೀಡಿದ್ದ ನೋಟಿಸ್ ಪ್ರಶ್ನಿಸಿದ್ದ ರಿಟ್ ಅರ್ಜಿಗಳಿಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಕಮಿಷನರ್ ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ವಿಚಾರಣೆಯನ್ನು ಬುಧವಾರಕ್ಕೆ (ಜೂ.೨೭) ಮುಂದೂಡಲಾಗಿದೆ.