ತಮಗೆ ಕಾನೂನು ಪದವಿ ಪ್ರವೇಶ ನಿರಾಕರಿಸಿರುವ ಎನ್ಎಲ್ಎಸ್ಯು ಕ್ರಮವನ್ನು ಪ್ರಶ್ನಿಸಿ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿ ಮುಗಿಲ್ ಅನ್ಬು ವಸಂತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಎನ್ಎಲ್ಎಸ್ಯು; ತನ್ನ ಕಾರ್ಯಕಾರಿ ಮಂಡಳಿಯ ನಿರ್ಧಾರವನ್ನು ನ್ಯಾಯಪೀಠಕ್ಕೆ ತಿಳಿಸಿತು.