<p><strong>ಬೆಂಗಳೂರು</strong>: ವಿಶ್ವಕರ್ಮ ಸಮುದಾಯದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಹಾಗೂ ವಿಶ್ವಕರ್ಮ ಅಭಿವೃದ್ಧಿ ನಿಗಮದಲ್ಲಿ ಪಡೆದಿರುವ ಸಾಲ ಮನ್ನಾ ಮಾಡಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯ ಕೆ.ಪಿ. ನಂಜುಂಡಿ ಆಗ್ರಹಿಸಿದ್ದಾರೆ.</p>.<p>ರಾಜ್ಯದಲ್ಲಿ 45 ಲಕ್ಷ ವಿಶ್ವಕರ್ಮರಿದ್ದು, ಚಿನ್ನ ಬೆಳ್ಳಿ, ಕಬ್ಬಿಣ, ಮರ, ಕಂಚು ಮತ್ತು ಶಿಲ್ಪದ ಕೆಲಸ ಮಾಡುತ್ತಿದ್ದಾರೆ. ಈ ಐದು ಕಸುಬುಗಳಿಂದ ದೇಶಕ್ಕೆ ಗೌರವ ತರುವುದರ ಜೊತೆಗೆ ಎಲ್ಲರ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದಾರೆ. ಆದರೆ ಈ ಸಮಾಜ ಇಂದು ಮೂಲೆ ಗುಂಪಾಗಿದೆ. ಎರಡು ತಿಂಗಳ ಹಿಂದೆ ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದಾಗ, ಎರಡು ತಿಂಗಳ ಬಳಿಕ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು ಎಂದವರು ತಿಳಿಸಿದ್ದಾರೆ.</p>.<p>ಈ ವೃತ್ತಿಗಳನ್ನು ಮಾಡುವ ವಿಶ್ವಕರ್ಮರ ಸ್ಥಿತಿ ಕೊರೊನಾದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಾಡಲಿಕ್ಕೆ ಕೆಲಸ ಇಲ್ಲ. ಕೆಲಸ ಕೊಡುವವರಂತೂ ಇಲ್ಲವೇ ಇಲ್ಲವಾಗಿದ್ದು, ಜೀವನವೇ ಬೀದಿ ಪಾಲಾಗಿದೆ ಎಂದು ಹೇಳಿದ್ದಾರೆ.</p>.<p>ಐದು ಕಸುಬುಗಳಲ್ಲಿ ನಿರತರಾದ ಕುಟುಂಬಗಳಿಗೆ ತಲಾ ₹10 ಸಾವಿರದಂತೆ ವಿಶೇಷ ಪ್ಯಾಕೇಜ್ ನೀಡಬೇಕು. ವಿಶ್ವಕರ್ಮ ಸಮಾಜದ 18 ಸಾವಿರ ಜನರು ಅಭಿವೃದ್ಧಿ ನಿಗಮದಲ್ಲಿ ಒಟ್ಟಾರೆ ₹87 ಕೋಟಿ ಸಾಲ ಪಡೆದಿದ್ದಾರೆ. ಇದನ್ನು ಮನ್ನಾ ಮಾಡಬೇಕು ಎಂದು ಅವರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಶ್ವಕರ್ಮ ಸಮುದಾಯದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಹಾಗೂ ವಿಶ್ವಕರ್ಮ ಅಭಿವೃದ್ಧಿ ನಿಗಮದಲ್ಲಿ ಪಡೆದಿರುವ ಸಾಲ ಮನ್ನಾ ಮಾಡಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯ ಕೆ.ಪಿ. ನಂಜುಂಡಿ ಆಗ್ರಹಿಸಿದ್ದಾರೆ.</p>.<p>ರಾಜ್ಯದಲ್ಲಿ 45 ಲಕ್ಷ ವಿಶ್ವಕರ್ಮರಿದ್ದು, ಚಿನ್ನ ಬೆಳ್ಳಿ, ಕಬ್ಬಿಣ, ಮರ, ಕಂಚು ಮತ್ತು ಶಿಲ್ಪದ ಕೆಲಸ ಮಾಡುತ್ತಿದ್ದಾರೆ. ಈ ಐದು ಕಸುಬುಗಳಿಂದ ದೇಶಕ್ಕೆ ಗೌರವ ತರುವುದರ ಜೊತೆಗೆ ಎಲ್ಲರ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದಾರೆ. ಆದರೆ ಈ ಸಮಾಜ ಇಂದು ಮೂಲೆ ಗುಂಪಾಗಿದೆ. ಎರಡು ತಿಂಗಳ ಹಿಂದೆ ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದಾಗ, ಎರಡು ತಿಂಗಳ ಬಳಿಕ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು ಎಂದವರು ತಿಳಿಸಿದ್ದಾರೆ.</p>.<p>ಈ ವೃತ್ತಿಗಳನ್ನು ಮಾಡುವ ವಿಶ್ವಕರ್ಮರ ಸ್ಥಿತಿ ಕೊರೊನಾದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಾಡಲಿಕ್ಕೆ ಕೆಲಸ ಇಲ್ಲ. ಕೆಲಸ ಕೊಡುವವರಂತೂ ಇಲ್ಲವೇ ಇಲ್ಲವಾಗಿದ್ದು, ಜೀವನವೇ ಬೀದಿ ಪಾಲಾಗಿದೆ ಎಂದು ಹೇಳಿದ್ದಾರೆ.</p>.<p>ಐದು ಕಸುಬುಗಳಲ್ಲಿ ನಿರತರಾದ ಕುಟುಂಬಗಳಿಗೆ ತಲಾ ₹10 ಸಾವಿರದಂತೆ ವಿಶೇಷ ಪ್ಯಾಕೇಜ್ ನೀಡಬೇಕು. ವಿಶ್ವಕರ್ಮ ಸಮಾಜದ 18 ಸಾವಿರ ಜನರು ಅಭಿವೃದ್ಧಿ ನಿಗಮದಲ್ಲಿ ಒಟ್ಟಾರೆ ₹87 ಕೋಟಿ ಸಾಲ ಪಡೆದಿದ್ದಾರೆ. ಇದನ್ನು ಮನ್ನಾ ಮಾಡಬೇಕು ಎಂದು ಅವರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>