<p>ಬೆಂಗಳೂರು: ನನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಆದಷ್ಟು ಬೇಗ ನಡೆಸುವಂತೆ ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಹಾಗೂ ಮಾಜಿ ಸಂಸದರಾದ ಸಿ. ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಪ್ರಜಾಪ್ರಭುತ್ವದ ಬಲವರ್ಧನೆ ಹಾಗೂ ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನವನ್ನು ಪಡೆಯುವದೃಷ್ಟಿಯಿಂದ ನೂತನ ಮುಖ್ಯಮಂತ್ರಿ ಯವರು ಈ ಬಗ್ಗೆ ಗಮನ ಹರಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<p>ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆಯ ಕರ್ನಾಟಕ ಶಾಖೆಯು ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಂಟಿ ಸಹಯೋಗದಲ್ಲಿ ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ನೂತನ ಶೈಕ್ಷಣಿಕ ವಿಭಾಗದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ವಿತರಣೆ- 5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದ ವರದಿ’ ಎಂಬ ವಿಷಯದ ಕುರಿತು ಪ್ರಧಾನ ಭಾಷಣ ಮಾಡಿದ ಅವರು, ಸಕಾಲಕ್ಕೆ ಚುನಾವಣೆ ನಡೆಯದ ಕಾರಣಕ್ಕಾಗಿ ಅಪಾರ ಮೊತ್ತದ ಅನುದಾನ ಅಲಭ್ಯವಾಗಿದೆ ಎಂದು ವಿವರಿಸಿದರು.</p>.<p>1993ರಲ್ಲಿ ಜಾರಿಗೊಂಡ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳ ದೆಸೆಯಿಂದಾಗಿ ಸ್ಥಳೀಯ ಸಂಸ್ಥೆಗಳ ಸಬಲೀಕರಣ ಮತ್ತು ಅಧಿಕಾರ ವಿಕೇಂದ್ರೀಕರಣದ ಹೊಸ ಮನ್ವಂತರಕ್ಕೆ ನಾಂದಿಯಾಯಿತೆಂದು ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.</p>.<p>ಕೇಂದ್ರ ಹಣಕಾಸು ಆಯೋಗದ ಷರತ್ತುಗಳ ಪಾಲನೆಯಲ್ಲಿ ವಿಫಲವಾದ ಕಾರಣ ಹಣಕಾಸಿನ ನೆರವು ಸ್ಥಗಿತಗೊಂಡು ರಾಜ್ಯದ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕವಾಗಿ ಹಿನ್ನಡೆಯಾಗಿದ್ದು ಪ್ರಗತಿ ಕುಂಠಿತವಾಗಿದೆ ಎಂದು ವಿಷಾದಿಸಿದರು.</p>.<p>ಹಿಂದಿನ ಬಿಬಿಎಂಪಿ- ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯ ವಿಳಂಬದಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರು ಮಹಾನಗರ ಸುಮಾರು 10 ಸಾವಿರ ಕೋಟಿಗಳಷ್ಟು ಕೇಂದ್ರ ಹಣಕಾಸು ನೆರವಿನಿಂದ ವಂಚಿತವಾಗಿದೆ ಎಂದು ಅವರು ವಿಶ್ಲೇಷಿಸಿದರು.</p>.<p>ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಸಬ್ಸಿಡಿ ಮತ್ತು ಪಿಂಚಣಿ ಬಾಬ್ತುಗಳಿಗೆ ವಾರ್ಷಿಕ ಸುಮಾರು ಒಂದು ಲಕ್ಷ ಕೋಟಿ ವ್ಯಯಿಸುತ್ತಿದೆ ಎಂದು ವಿವರಿಸಿದರು.</p>.<p>ಇದರ ಪರಿಣಾಮವಾಗಿ ತಲಾ ಆದಾಯದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನಕ್ಕೇರಿದೆ ಎಂದು ತಿಳಿಸಿದ ಅವರು, ಆಸ್ತಿ ತೆರಿಗೆ ಸಂಗ್ರಹದ ಮೂಲಕ ಸ್ಥಳೀಯ ಸಂಸ್ಥೆಗಳು ಹೆಚ್ಚಿನಆದಾಯ ಸಂಪನ್ಮೂಲ ಕ್ರೋಢೀಕರಿಸ ಬಹುದೆಂದು ಅಭಿಪ್ರಾಯಪಟ್ಟರು.</p>.<p>ಸಂವಾದ ಗೋಷ್ಠಿಯ ಅಧ್ಯಕ್ಷತೆವಹಿಸಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಐಐಪಿಎ ಕರ್ನಾಟಕ ಶಾಖೆಯ ಅಧ್ಯಕ್ಷ ತ.ಮ.ವಿಜಯ ಭಾಸ್ಕರ್ ಮಾತನಾಡಿ, ಅಧಿಕಾರ ವಿಕೇಂದ್ರೀಕರಣದ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ದಕ್ಷಿಣದ ರಾಜ್ಯಗಳು ಹೆಚ್ಚಿನ ಅಭಿವೃದ್ಧಿ ಸಾಧಿಸಿವೆ ಎಂದು ವಿಶ್ಲೇಷಿಸಿದರು.</p>.<p>ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಎಂ. ಸನಾವುಲ್ಲಾ, ಹಿರಿಯ ಪ್ರಾಧ್ಯಾಪಕರಾದ ಡಾ. ಕೆ.ಗಾಯತ್ರಿ ಮತ್ತು ಡಾ.ಎನ್. ಶಿವಣ್ಣ ವರದಿಯ ವಿವಿಧ ಆಯಾಮಗಳ ಬಗ್ಗೆ ಬೆಳಕು ಚೆಲ್ಲಿದರು.</p>.<p>ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಆಯೋಗದ ಅಧ್ಯಕ್ಷರಾದ ಡಿ.ಆರ್.ಪಾಟೀಲ್, ಕುಲಸಚಿವರಾದ ಎ. ನವೀನ್ ಜೋಸೆಫ್, ಐಐಪಿಎ ಕಾರ್ಯದರ್ಶಿ ಡಾ. ಡಿ.ಜೀವನ್ ಕುಮಾರ್, ಉಪಸ್ಥಿತರಿದ್ದರು. ಕಲಾ ನಿಕಾಯದ ಡೀನರಾದ ಪ್ರೊ. ಜ್ಯೋತಿ ವೆಂಕಟೇಶ್ ಪ್ರಾಸ್ತಾವಿಕ ಭಾಷಣ ಮಾಡಿದರು. ಡಾ.ಮಾಲಿನಿ.ಎಂ. ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-4-2120398469</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಆದಷ್ಟು ಬೇಗ ನಡೆಸುವಂತೆ ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಹಾಗೂ ಮಾಜಿ ಸಂಸದರಾದ ಸಿ. ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಪ್ರಜಾಪ್ರಭುತ್ವದ ಬಲವರ್ಧನೆ ಹಾಗೂ ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನವನ್ನು ಪಡೆಯುವದೃಷ್ಟಿಯಿಂದ ನೂತನ ಮುಖ್ಯಮಂತ್ರಿ ಯವರು ಈ ಬಗ್ಗೆ ಗಮನ ಹರಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<p>ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆಯ ಕರ್ನಾಟಕ ಶಾಖೆಯು ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಂಟಿ ಸಹಯೋಗದಲ್ಲಿ ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ನೂತನ ಶೈಕ್ಷಣಿಕ ವಿಭಾಗದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ವಿತರಣೆ- 5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದ ವರದಿ’ ಎಂಬ ವಿಷಯದ ಕುರಿತು ಪ್ರಧಾನ ಭಾಷಣ ಮಾಡಿದ ಅವರು, ಸಕಾಲಕ್ಕೆ ಚುನಾವಣೆ ನಡೆಯದ ಕಾರಣಕ್ಕಾಗಿ ಅಪಾರ ಮೊತ್ತದ ಅನುದಾನ ಅಲಭ್ಯವಾಗಿದೆ ಎಂದು ವಿವರಿಸಿದರು.</p>.<p>1993ರಲ್ಲಿ ಜಾರಿಗೊಂಡ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳ ದೆಸೆಯಿಂದಾಗಿ ಸ್ಥಳೀಯ ಸಂಸ್ಥೆಗಳ ಸಬಲೀಕರಣ ಮತ್ತು ಅಧಿಕಾರ ವಿಕೇಂದ್ರೀಕರಣದ ಹೊಸ ಮನ್ವಂತರಕ್ಕೆ ನಾಂದಿಯಾಯಿತೆಂದು ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.</p>.<p>ಕೇಂದ್ರ ಹಣಕಾಸು ಆಯೋಗದ ಷರತ್ತುಗಳ ಪಾಲನೆಯಲ್ಲಿ ವಿಫಲವಾದ ಕಾರಣ ಹಣಕಾಸಿನ ನೆರವು ಸ್ಥಗಿತಗೊಂಡು ರಾಜ್ಯದ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕವಾಗಿ ಹಿನ್ನಡೆಯಾಗಿದ್ದು ಪ್ರಗತಿ ಕುಂಠಿತವಾಗಿದೆ ಎಂದು ವಿಷಾದಿಸಿದರು.</p>.<p>ಹಿಂದಿನ ಬಿಬಿಎಂಪಿ- ಈಗಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯ ವಿಳಂಬದಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರು ಮಹಾನಗರ ಸುಮಾರು 10 ಸಾವಿರ ಕೋಟಿಗಳಷ್ಟು ಕೇಂದ್ರ ಹಣಕಾಸು ನೆರವಿನಿಂದ ವಂಚಿತವಾಗಿದೆ ಎಂದು ಅವರು ವಿಶ್ಲೇಷಿಸಿದರು.</p>.<p>ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಸಬ್ಸಿಡಿ ಮತ್ತು ಪಿಂಚಣಿ ಬಾಬ್ತುಗಳಿಗೆ ವಾರ್ಷಿಕ ಸುಮಾರು ಒಂದು ಲಕ್ಷ ಕೋಟಿ ವ್ಯಯಿಸುತ್ತಿದೆ ಎಂದು ವಿವರಿಸಿದರು.</p>.<p>ಇದರ ಪರಿಣಾಮವಾಗಿ ತಲಾ ಆದಾಯದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನಕ್ಕೇರಿದೆ ಎಂದು ತಿಳಿಸಿದ ಅವರು, ಆಸ್ತಿ ತೆರಿಗೆ ಸಂಗ್ರಹದ ಮೂಲಕ ಸ್ಥಳೀಯ ಸಂಸ್ಥೆಗಳು ಹೆಚ್ಚಿನಆದಾಯ ಸಂಪನ್ಮೂಲ ಕ್ರೋಢೀಕರಿಸ ಬಹುದೆಂದು ಅಭಿಪ್ರಾಯಪಟ್ಟರು.</p>.<p>ಸಂವಾದ ಗೋಷ್ಠಿಯ ಅಧ್ಯಕ್ಷತೆವಹಿಸಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಐಐಪಿಎ ಕರ್ನಾಟಕ ಶಾಖೆಯ ಅಧ್ಯಕ್ಷ ತ.ಮ.ವಿಜಯ ಭಾಸ್ಕರ್ ಮಾತನಾಡಿ, ಅಧಿಕಾರ ವಿಕೇಂದ್ರೀಕರಣದ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ದಕ್ಷಿಣದ ರಾಜ್ಯಗಳು ಹೆಚ್ಚಿನ ಅಭಿವೃದ್ಧಿ ಸಾಧಿಸಿವೆ ಎಂದು ವಿಶ್ಲೇಷಿಸಿದರು.</p>.<p>ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಎಂ. ಸನಾವುಲ್ಲಾ, ಹಿರಿಯ ಪ್ರಾಧ್ಯಾಪಕರಾದ ಡಾ. ಕೆ.ಗಾಯತ್ರಿ ಮತ್ತು ಡಾ.ಎನ್. ಶಿವಣ್ಣ ವರದಿಯ ವಿವಿಧ ಆಯಾಮಗಳ ಬಗ್ಗೆ ಬೆಳಕು ಚೆಲ್ಲಿದರು.</p>.<p>ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಆಯೋಗದ ಅಧ್ಯಕ್ಷರಾದ ಡಿ.ಆರ್.ಪಾಟೀಲ್, ಕುಲಸಚಿವರಾದ ಎ. ನವೀನ್ ಜೋಸೆಫ್, ಐಐಪಿಎ ಕಾರ್ಯದರ್ಶಿ ಡಾ. ಡಿ.ಜೀವನ್ ಕುಮಾರ್, ಉಪಸ್ಥಿತರಿದ್ದರು. ಕಲಾ ನಿಕಾಯದ ಡೀನರಾದ ಪ್ರೊ. ಜ್ಯೋತಿ ವೆಂಕಟೇಶ್ ಪ್ರಾಸ್ತಾವಿಕ ಭಾಷಣ ಮಾಡಿದರು. ಡಾ.ಮಾಲಿನಿ.ಎಂ. ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-4-2120398469</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>