ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ತಡೆಯಾಜ್ಞೆ ತೆರವುಗೊಳಿಸಿತು. ನವೆಂಬರ್ 2ರೊಳಗೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿತು. ‘ಹಾಸನ, ಅರಸೀಕೆರೆ, ಶಿಡ್ಲಘಟ್ಟ, ಕೊಪ್ಪಳ, ಹರಿಹರ ನಗರಸಭೆಗೆ ನಿಗದಿ ಮಾಡಿರುವ ಮೀಸಲಾತಿ ಪ್ರಶ್ನಿಸಿ ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳಿಗೂ ಚುನಾವಣೆ ನಡೆಸಬೇಕು. ಆದರೆ, ಫಲಿತಾಂಶಗಳು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತವೆ’ ಎಂದು ಪೀಠ ತಿಳಿಸಿತು.