‘ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿದ್ದೇ ತಪ್ಪು. ಆದ್ದರಿಂದಲೇ ಇಷ್ಟೆಲ್ಲ ತೊಂದರೆ ಆಗಿದೆ. ಇದಕ್ಕೆ ಕಾರಣರಾದವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳೀಯರು ಒತ್ತಾಯಿಸಿದರು.‘ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳು, ಈ ಭಾಗದಲ್ಲಿ ಕೆಲ ಕಾಮಗಾರಿ ಆರಂಭಿಸಿದ್ದಾರೆ. ಅವೆಲ್ಲವೂ ಅವೈಜ್ಞಾನಿಕವಾಗಿದ್ದು, ಇದು ನಮ್ಮನ್ನೆಲ್ಲ ಬೀದಿಗೆ ತಂದು ನಿಲ್ಲಿಸಿವೆ. ರಾತ್ರಿ ಮನೆಗೆ ನೀರು ನುಗ್ಗಿದ್ದರಿಂದ ನಾವೆಲ್ಲರೂ ನರಕಯಾತನೆ ಅನುಭವಿಸಿದೆವು’ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರು.