<p><strong>ಕೆ.ಆರ್.ಪುರ:</strong> ಎನ್.ಆರ್.ಐ ಬಡಾವಣೆ ಮುಖ್ಯರಸ್ತೆಯ ಇಂದಿರಾ ಕ್ಯಾಂಟೀನ್ ಸಮೀಪ ನಿರ್ಮಿಸಲಾಗಿದ್ದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸ್ಥಳೀಯರ ವಿರೋಧದ ನಡುವೆ ಶುಕ್ರವಾರ ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿದರು.</p>.<p>ಶ್ರೀಕನಕ ಜನಜಾಗೃತಿ ಕುರುಬರ ಸಂಘ ಹಾಗೂ ಸ್ಥಳೀಯರ ಸಹಕಾರದಿಂದ ಸುಮಾರು 9 ಅಡಿ ಎತ್ತರದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲಾಗಿತ್ತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ದಿನದಂದು ಪ್ರತಿಮೆ ಅನಾವರಣಗೊಳಿಸಲು ಸಿದ್ಧತೆ ನಡೆಸಲಾಗಿತ್ತು.</p>.<p>ಆದರೆ, ಬಿಬಿಎಂಪಿ ಜಾಗದಲ್ಲಿ ಯಾವುದೇ ಅನುಮತಿ ಪಡೆದಿಲ್ಲ ಎಂದು ಹೇಳಿ ಪೊಲೀಸ್ ಬಂದೋಬಸ್ತ್ನಲ್ಲಿ ಶುಕ್ರವಾರ ಮಧ್ಯಾಹ್ನ ತೆರವುಗೊಳಿಸಲಾಯಿತು. </p>.<p>ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು. ಇದೇ ಜಾಗದಲ್ಲಿ ಪ್ರತಿಮೆ ಪ್ರತಿಷ್ಠಾಪಿಸಬೇಕೆಂದು ಪಟ್ಟುಹಿಡಿದರು.</p>.<p>ಕಾಂತಿ ವೀರಸಂಗೊಳ್ಳಿ ರಾಯಣ್ಣ ಒಂದು ಸಮಾಜಕ್ಕೆ ಸೀಮತರಾದವರಲ್ಲ. ಅವರೊಬ್ಬ ಸ್ವಾತಂತ್ರ್ಯ ಹೋರಾಟಗಾರ. ಅಂತವರ ಪ್ರತಿಮೆ ನಿರ್ಮಿಸಿದ್ದೇವೆ. ಅಧಿಕಾರಿಗಳ ನಡೆ ಖಂಡನೀಯ ಎಂದು ಸಂಘದ ಅಧ್ಯಕ್ಷ ಕೃಷ್ಣಪ್ಪ ಆಕ್ಷೇಪ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಎನ್.ಆರ್.ಐ ಬಡಾವಣೆ ಮುಖ್ಯರಸ್ತೆಯ ಇಂದಿರಾ ಕ್ಯಾಂಟೀನ್ ಸಮೀಪ ನಿರ್ಮಿಸಲಾಗಿದ್ದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸ್ಥಳೀಯರ ವಿರೋಧದ ನಡುವೆ ಶುಕ್ರವಾರ ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿದರು.</p>.<p>ಶ್ರೀಕನಕ ಜನಜಾಗೃತಿ ಕುರುಬರ ಸಂಘ ಹಾಗೂ ಸ್ಥಳೀಯರ ಸಹಕಾರದಿಂದ ಸುಮಾರು 9 ಅಡಿ ಎತ್ತರದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲಾಗಿತ್ತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ದಿನದಂದು ಪ್ರತಿಮೆ ಅನಾವರಣಗೊಳಿಸಲು ಸಿದ್ಧತೆ ನಡೆಸಲಾಗಿತ್ತು.</p>.<p>ಆದರೆ, ಬಿಬಿಎಂಪಿ ಜಾಗದಲ್ಲಿ ಯಾವುದೇ ಅನುಮತಿ ಪಡೆದಿಲ್ಲ ಎಂದು ಹೇಳಿ ಪೊಲೀಸ್ ಬಂದೋಬಸ್ತ್ನಲ್ಲಿ ಶುಕ್ರವಾರ ಮಧ್ಯಾಹ್ನ ತೆರವುಗೊಳಿಸಲಾಯಿತು. </p>.<p>ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು. ಇದೇ ಜಾಗದಲ್ಲಿ ಪ್ರತಿಮೆ ಪ್ರತಿಷ್ಠಾಪಿಸಬೇಕೆಂದು ಪಟ್ಟುಹಿಡಿದರು.</p>.<p>ಕಾಂತಿ ವೀರಸಂಗೊಳ್ಳಿ ರಾಯಣ್ಣ ಒಂದು ಸಮಾಜಕ್ಕೆ ಸೀಮತರಾದವರಲ್ಲ. ಅವರೊಬ್ಬ ಸ್ವಾತಂತ್ರ್ಯ ಹೋರಾಟಗಾರ. ಅಂತವರ ಪ್ರತಿಮೆ ನಿರ್ಮಿಸಿದ್ದೇವೆ. ಅಧಿಕಾರಿಗಳ ನಡೆ ಖಂಡನೀಯ ಎಂದು ಸಂಘದ ಅಧ್ಯಕ್ಷ ಕೃಷ್ಣಪ್ಪ ಆಕ್ಷೇಪ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>