ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸ್ ಹಾಗು ಅರೋಗ್ಯ ಸಿಬ್ಬಂದಿಯವರ ಮೇಲೆ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಅತ್ಯಂತ ಖಂಡನೀಯ. ತಮ್ಮನ್ನು ರಕ್ಷಿಸಲು ಬಂದಿರುವವರ ಮೇಲೆ ಹಲ್ಲೆ ಮಾಡುವಂತಹ ಹೀನ ಮನಸ್ಥಿತಿಯವರ ಮೇಲೆ ನಮ್ಮ ಸರ್ಕಾರ ಕಾನೂನು ರೀತ್ಯಾ ತಕ್ಕ ಕ್ರಮ ಕೈಗೊಳ್ಳಲಿದೆ. pic.twitter.com/HEbacWJZnj
ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು. (1/4)
ಬೆಂಗಳೂರಿನ ಪಾದರಾಯನಪುರದಲ್ಲಿ ಕ್ವಾರಂಟೈನ್ ಆದವರ ಪರಿಶೀಲನೆಗೆ ಪೊಲೀಸ್ ಹಾಗು ಅರೋಗ್ಯ ಸಿಬ್ಬಂದಿ ಹೋದಾಗ ಅವರ ಮೇಲೆ ಹಲ್ಲೆ , ಬೆಂಕಿ ಹಾಕಿರುವ ಘಟನೆ ಅತ್ಯಂತ ಖಂಡನೀಯ ಕೊರೊನ ವಿರುದ್ಧದ ಹೋರಾಟ ಮಾನವತೆಯ ಹೋರಾಟ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಬಲವಾದ ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಸಚಿವರು ಡಿಜಿಪಿ ಯೊಂದಿಗೆ ಮಾತನಾಡಿದ್ದೇನೆ