ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳು ಹೆಚ್ಚು ಕಾಣಿಸಿಕೊಂಡು ಸೀಲ್ ಡೌನ್ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ದ್ವಿತೀಯ ಸಂಪರ್ಕ ಹೊಂದಿದ್ದ 58 ಜನರನ್ನು ಭಾನುವಾರ ಕ್ವಾರೆಂಟೈನ್ ಮಾಡುವ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ.
ಪಾದರಾಯನಪುರದಗುಡ್ಡದಹಳ್ಳಿ ಅರ್ಫತ್ ನಗರದಲ್ಲಿ100ಕ್ಕೂ ಹೆಚ್ಚು ಸ್ಥಳೀಯರಿಂದ ಬ್ಯಾರಿಕೇಡ್ಗಳನ್ನು ಉರುಳಿಸಿ ಗಲಾಟೆ ಮಾಡಿದ್ದಾರೆ.ಎಲ್ಲ ಕಡೆ ಬ್ಯಾರಿಕೇಡ್ ಹಾಕಿ ನಿರ್ಬಂಧ ಹೇರಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹೊರಗೆ ಹೋಗೋಕೆ ಆಗ್ತಿಲ್ಲ. ಊಟ ಸಿಗುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಸ್ತುತ ಪಾದರಾಯನಪುರ ವಾರ್ಡ್ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
ಪಾದರಾಯನಪುರದಲ್ಲಿ ಇಲ್ಲಿಯವರೆಗೆ ಒಟ್ಟು18 ಕೊರೊನಾ ಸೋಂಕು ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಸೀಲ್ ಡೌನ್ ಮಾಡಲಾಗಿದೆ. ಈ ಭಾಗದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತದಲ್ಲಿ ಇದ್ದವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತ್ಯೇಕ ಕ್ವಾರಂಟೈನ್ ಮಾಡಲಾಗುತ್ತಿದೆ.
ಈ ಸಂಬಂಧ ಮಾತನಾಡಿದ ಪಶ್ಚಿಮ ವಲಯದ ಆರೋಗ್ಯಾಧಿಕಾರಿ ಬಾಲಸುಂದರ್, ಒಟ್ಟು 58 ಜನರು ಕೊರೊನಾ ಸೋಂಕಿತರ ದ್ವಿತೀಯ ಸಂಪರ್ಕದಲ್ಲಿದ್ದರು ಇವರಲ್ಲಿ 17 ಜನ ಸಹಕಾರ ನೀಡಿ, ಕ್ವಾರಂಟೈನ್ ಆಗಿದ್ದಾರೆ. ಉಳಿದವರು ನಮಗೆ ಸಹಕಾರ ನೀಡಿಲ್ಲ. ಶಾಸಕರು, ಪಾಲಿಕೆ ಸದಸ್ಯರು ಬರಬೇಕು. ನಮಗೆ ಕೊರೊನಾದ ಯಾವುದೇ ಲಕ್ಷಣ ಇಲ್ಲ ಎಂದು ಹೇಳಿದ್ದಾರೆ. ಅವರನ್ನು ಮನವೊಲಿಸಲು ಸಾಧ್ಯವಾಗದ ಕಾರಣ ಸೋಮವಾರ ಬೆಳಗ್ಗೆ ಕ್ವಾರೆಂಟೈನ್ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಶ್ರೀರಾಮುಲು ಖಂಡನೆ
ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸ್ ಹಾಗು ಅರೋಗ್ಯ ಸಿಬ್ಬಂದಿಯವರ ಮೇಲೆ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಅತ್ಯಂತ ಖಂಡನೀಯ.
— B Sriramulu (@sriramulubjp) April 19, 2020
ತಮ್ಮನ್ನು ರಕ್ಷಿಸಲು ಬಂದಿರುವವರ ಮೇಲೆ ಹಲ್ಲೆ ಮಾಡುವಂತಹ ಹೀನ ಮನಸ್ಥಿತಿಯವರ ಮೇಲೆ ನಮ್ಮ ಸರ್ಕಾರ ಕಾನೂನು ರೀತ್ಯಾ ತಕ್ಕ ಕ್ರಮ ಕೈಗೊಳ್ಳಲಿದೆ. pic.twitter.com/HEbacWJZnj
ಕುಮಾರಸ್ವಾಮಿ ಖಂಡನೆ
ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು.
— H D Kumaraswamy (@hd_kumaraswamy) April 19, 2020
(1/4)
ಗೃಹ ಸಚಿವರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚರ್ಚೆ
‘ಬೆಂಗಳೂರಿನ ಪಾದರಾಯನಪುರದಲ್ಲಿ ಕ್ವಾರಂಟೈನ್ ಆದವರ ಪರಿಶೀಲನೆಗೆ ಪೊಲೀಸ್ ಹಾಗು ಅರೋಗ್ಯ ಸಿಬ್ಬಂದಿ ಹೋದಾಗ ಅವರ ಮೇಲೆ ಹಲ್ಲೆ ನಡೆಸಿ,ಬೆಂಕಿ ಹಾಕಿರುವ ಘಟನೆ ಅತ್ಯಂತ ಖಂಡನೀಯ. ಕೊರೊನ ವಿರುದ್ಧದ ಹೋರಾಟ ಮಾನವತೆಯ ಹೋರಾಟ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಬಲವಾದ ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಸಚಿವರು, ಡಿಜಿಪಿಯೊಂದಿಗೆ ಮಾತನಾಡಿದ್ದೇನೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ಪಾದರಾಯನಪುರದಲ್ಲಿ ಕ್ವಾರಂಟೈನ್ ಆದವರ ಪರಿಶೀಲನೆಗೆ ಪೊಲೀಸ್ ಹಾಗು ಅರೋಗ್ಯ ಸಿಬ್ಬಂದಿ ಹೋದಾಗ ಅವರ ಮೇಲೆ ಹಲ್ಲೆ , ಬೆಂಕಿ ಹಾಕಿರುವ ಘಟನೆ ಅತ್ಯಂತ ಖಂಡನೀಯ
— Pralhad Joshi (@JoshiPralhad) April 19, 2020
ಕೊರೊನ ವಿರುದ್ಧದ ಹೋರಾಟ ಮಾನವತೆಯ ಹೋರಾಟ
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಬಲವಾದ ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಸಚಿವರು ಡಿಜಿಪಿ ಯೊಂದಿಗೆ ಮಾತನಾಡಿದ್ದೇನೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.