ಷರತ್ತುಗಳು
* ಪರವಾನಿಗೆ ಪಡೆದ ಸಂಸ್ಥೆಯಲ್ಲಿ 4 ಕ್ಕಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅರ್ಜಿ ಸಲ್ಲಿಸಿದ್ದರೆ ಕೆಲಸದ ಸ್ಥಳದ ಕಡ್ಡಾಯ ಪರಿಶೀಲನೆ ನಡೆಸಲಾಗುವುದು. ಪರವಾನಿಗೆ ಪಡೆಯದ ಸಂಸ್ಥೆಗಳಲ್ಲಿ 2 ಕ್ಕಿಂತ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದರೆ, ಕಡ್ಡಾಯ ಪರಿಶೀಲನೆ ನಡೆಸಲಾಗುವುದು.
* ಬೇರೆ ರಾಜ್ಯಗಳಿಂದ ಬಂದು ಇಲ್ಲಿ ಅಗಸ/ ಕ್ಷೌರಿಕ ವೃತ್ತಿ ನಿರ್ವಹಿಸುತ್ತಿದ್ದರೆ,ಅವರಿಗೂ ಪರಿಹಾರ ನೀಡಲಾಗುವುದು.
* ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು.
* ಸೇವಾಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಧಾರ್ ಆಧಾರಿತ ಡಿಬಿಟಿ ಮೂಲಕ ಖಾತೆಗಳಿಗೆ ಹಣ ವರ್ಗಾವಣೆ.
* 18 ರಿಂದ 65 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕಡು ಬಡ ಕುಟುಂಬಗಳಿಗೆ ಸೇರಿದವರಿಗೆ ಮಾತ್ರ ಹಣ ಸಿಗಲಿದೆ.