ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ ಪರಿಹಾರಕ್ಕೆ ಷರತ್ತುಗಳು

Last Updated 10 ಜೂನ್ 2020, 20:23 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌–19 ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಅಗಸ ಮತ್ತು ಕ್ಷೌರಿಕ ವೃತ್ತಿಯಲ್ಲಿರುವವರಿಗೆ₹5000 ಪರಿಹಾರ ಪಡೆಯಲು ಕೆಲವು ಷರತ್ತುಗಳನ್ನು ಸರ್ಕಾರ ವಿಧಿಸಿದೆ.

ಷರತ್ತುಗಳು
* ಪರವಾನಿಗೆ ಪಡೆದ ಸಂಸ್ಥೆಯಲ್ಲಿ 4 ಕ್ಕಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅರ್ಜಿ ಸಲ್ಲಿಸಿದ್ದರೆ ಕೆಲಸದ ಸ್ಥಳದ ಕಡ್ಡಾಯ ಪರಿಶೀಲನೆ ನಡೆಸಲಾಗುವುದು. ಪರವಾನಿಗೆ ಪಡೆಯದ ಸಂಸ್ಥೆಗಳಲ್ಲಿ 2 ಕ್ಕಿಂತ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದರೆ, ಕಡ್ಡಾಯ ಪರಿಶೀಲನೆ ನಡೆಸಲಾಗುವುದು.
* ಬೇರೆ ರಾಜ್ಯಗಳಿಂದ ಬಂದು ಇಲ್ಲಿ ಅಗಸ/ ಕ್ಷೌರಿಕ ವೃತ್ತಿ ನಿರ್ವಹಿಸುತ್ತಿದ್ದರೆ,ಅವರಿಗೂ ಪರಿಹಾರ ನೀಡಲಾಗುವುದು.
* ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು.
* ಸೇವಾಸಿಂಧು ಪೋರ್ಟಲ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಧಾರ್‌ ಆಧಾರಿತ ಡಿಬಿಟಿ ಮೂಲಕ ಖಾತೆಗಳಿಗೆ ಹಣ ವರ್ಗಾವಣೆ.
* 18 ರಿಂದ 65 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕಡು ಬಡ ಕುಟುಂಬಗಳಿಗೆ ಸೇರಿದವರಿಗೆ ಮಾತ್ರ ಹಣ ಸಿಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT