ಕೊರೊನಾ ಸೋಂಕು ಹರಡುವಿಕೆ ತಡೆಯಲು ಲಾಕ್ಡೌನ್ ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ನಡುವೆ, ಶ್ರೀರಾಂಪುರ ನಗರದ ರಾಯಲ್ ಎನ್ಕ್ಲೇವ್ ಆರ್ಚ್ನ ಮುಂಭಾಗದ ರಸ್ತೆಯಲ್ಲಿ, ಅಮೃತಹಳ್ಳಿ ಹಾಗೂ ಲಕ್ಷ್ಮೀ ನಾರಾಯಣ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಿಶ್ವನಾಥ್ ಮತ್ತು ನರಸಮ್ಮ ಎಂಬವರನ್ನು ಬಂಧಿಸಲಾಗಿದೆ.