ಸಾಮಾನ್ಯ ದಿನಗಳಲ್ಲಿ ಈ ಆಶ್ರಮದಲ್ಲಿ ಮೂರು ಹೊತ್ತು ದಾಸೋಹ ನಡೆಯುತ್ತಿತ್ತು. ಬೆಳಿಗ್ಗೆ 500 ಮಂದಿಗೆ ಉಪಾಹಾರ, ಮಧ್ಯಾಹ್ನ 1,500 ಹಾಗೂ ರಾತ್ರಿ 1 ಸಾವಿರ ಭಕ್ತಾಧಿಗಳಿಗೆ ಊಟವನ್ನು ಪ್ರಸಾದದ ರೂಪದಲ್ಲಿ ವಿತರಿಸಲಾಗುತ್ತಿತ್ತು. ಲಾಕ್ ಡೌನ್ ಹಿನ್ನೆಲೆಯಲ್ಲಿ ಈಗ ತಾತ್ಕಾಲಿಕವಾಗಿ ಆಶ್ರಮದಲ್ಲಿ ಭಕ್ತಾಧಿಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಅಲ್ಲಿ ತಯಾರಿಸಿದ ಊಟವನ್ನು ನಗರದ ವಿವಿಧೆಡೆ ಅಗತ್ಯ ಇರುವವರಿಗೆ ಮಧ್ಯಾಹ್ನ ವಿತರಿಸಲಾಗುತ್ತಿದೆ.