<p><strong>ಬೆಂಗಳೂರು:</strong> ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ಅಗತ್ಯ ಸೇವೆಗಳ ನೆಪದಲ್ಲಿ ಜನರ ಓಡಾಟ ಮುಂದುವರಿದಿದ್ದು, ಒಂದೇ ದಿನದಲ್ಲಿ ಇಂಥವರ 1,640 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>‘ಶುಕ್ರವಾರ ಬೆಳಿಗ್ಗೆಯಿಂದ ಶನಿವಾರ ಬೆಳಿಗ್ಗೆವರೆಗೆ ನಗರದೆಲ್ಲೆಡೆ ಬಿಗಿ ಭದ್ರತೆ ಇತ್ತು. ಈ ಸಂದರ್ಭದಲ್ಲಿ 1,479 ದ್ವಿಚಕ್ರ ವಾಹನ, 91 ಆಟೊ ಹಾಗೂ 70 ಕಾರುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಜಪ್ತಿ ಮಾಡಲಾದ ವಾಹನಗಳನ್ನು ನಿಗದಿತ ಸ್ಥಳಗಳಲ್ಲಿ ನಿಲ್ಲಿಸಲಾಗಿದೆ. ಮಾಲೀಕರು ನ್ಯಾಯಾಲಯದ ಮೂಲಕ ವಾಹನಗಳನ್ನು ಬಿಡಿಸಿಕೊಳ್ಳಬೇಕಾಗುತ್ತದೆ’ ಎಂದೂ ತಿಳಿಸಿದರು.</p>.<p><strong>ರೈಲು ನಿಲ್ದಾಣ ಭರ್ತಿ:</strong> ನಗರದ ಮೆಜೆಸ್ಟಿಕ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಯಶವಂತಪುರ ರೈಲು ನಿಲ್ದಾಣಗಳಲ್ಲಿ ಶನಿವಾರ ಜನಸಂದಣಿ ಇತ್ತು. ನಿಲ್ದಾಣದ ಹೊರ ಭಾಗ ಹಾಗೂ ಒಳಭಾಗ ಪ್ರಯಾಣಿಕರಿಂದ ಭರ್ತಿ ಆಗಿತ್ತು.</p>.<p>ಹೊರ ಜಿಲ್ಲೆ ಹಾಗೂ ಹೊರ ರಾಜ್ಯಕ್ಕೆ ಹೊರಟಿದ್ದ ಜನ, ಬೆಳಿಗ್ಗೆಯೇ ನಿಲ್ದಾಣಕ್ಕೆ ಬಂದಿದ್ದರು. ಊಟ, ಆಹಾರ ಹಾಗೂ ನೀರಿಗಾಗಿ ಪ್ರಯಾಣಿಕರು ಪರದಾಡಿದರು.</p>.<p>‘ರಾತ್ರಿ ರೈಲಿನಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸಲಾಗಿದೆ. ಬೆಳಿಗ್ಗೆ 10ರ ನಂತರ ಪೊಲೀಸರು ರಸ್ತೆಯಲ್ಲಿ ಓಡಾಡಲು ಬಿಡುವುದಿಲ್ಲ. ಆಟೊ ಹಾಗೂ ಕ್ಯಾಬ್ಗಳು ಸಿಗುವುದಿಲ್ಲ. ಹೀಗಾಗಿ, ಬೆಳಿಗ್ಗೆ 10 ಗಂಟೆ ಒಳಗೆಯೇ ನಿಲ್ದಾಣಕ್ಕೆ ಬಂದಿದ್ದೇವೆ’ ಎಂದು ಉತ್ತರ ಪ್ರದೇಶದ ಕಾರ್ಮಿಕ ಬಿಜು ಹೇಳಿದರು.</p>.<p>‘ಸ್ನೇಹಿತರೆಲ್ಲರೂ ಸೇರಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದೆವು. ಕರ್ಫ್ಯೂನಿಂದಾಗಿ ಕೆಲಸ ಹೋಗಿದ್ದು, ಹೀಗಾಗಿ ವಾಪಸು ಹೊರಟಿದ್ದೇವೆ. ಕರ್ಫ್ಯೂ ತೆರುವಾದ ನಂತರ ಪುನಃ ಬೆಂಗಳೂರಿಗೆ ಬರುತ್ತೇವೆ’ ಎಂದೂ ತಿಳಿಸಿದರು.</p>.<p><strong>ಉದ್ಯಾನದ ಎದುರೇ ಮಾರುಕಟ್ಟೆ:</strong> ಬಸವನಗುಡಿ, ರಾಜಾಜಿನಗರ, ವಿಜಯನಗರ ಹಾಗೂ ಹಲವೆಡೆ ಮಾರುಕಟ್ಟೆಗಳನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂದ್ ಮಾಡಿಸಿದ್ದಾರೆ. ಹೀಗಾಗಿ, ಅದೇ ಪ್ರದೇಶಗಳ ಉದ್ಯಾನ ಎದುರೇ ವ್ಯಾಪಾರಿಗಳು ತರಕಾರಿ ಸೇರಿ ಅಗತ್ಯ ವಸ್ತುಗಳನ್ನು ಮಾರುತ್ತಿದ್ದಾರೆ.</p>.<p>ಜನರು ತಂಡೋಪತಂಡವಾಗಿ ಉದ್ಯಾನ ಬಳಿ ಬಂದು ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದು, ಪರಸ್ಪರ ಅಂತರವನ್ನೂ ಕಲ್ಪಿಸುತ್ತಿಲ್ಲ. ಇದು ಸೋಂಕು ಹರಡಲು ದಾರಿ ಮಾಡಿಕೊಡುತ್ತಿದೆ.</p>.<p><strong>ಕ್ಯಾಬ್, ಆಟೊ ಓಡಾಟ:</strong> ಗೂಡ್ಸ್ ಹಾಗೂ ತುರ್ತು ಸೇವೆಗಳ ವಾಹನಗಳನ್ನು ಹೊರತುಪಡಿಸಿ ಎಲ್ಲ ಬಗೆಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆದರೆ, ಆಟೊ ಹಾಗೂ ಕ್ಯಾಬ್ಗಳು ನಗರದಲ್ಲಿ ನಿರಂತರವಾಗಿ ಸಂಚರಿಸುತ್ತಿವೆ.</p>.<p>ನಗರದ ಪ್ರತಿಯೊಂದು ರಸ್ತೆಯನ್ನೂ ಪೊಲೀಸರು ಬ್ಯಾರಿಕೇಡ್ ಹಾಕಿ ಕಾವಲು ಕಾಯುತ್ತಿದ್ದಾರೆ. ಆಟೊ ಹಾಗೂ ಕ್ಯಾಬ್ಗಳನ್ನು ತಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇಂಥ ಸಂದರ್ಭದಲ್ಲೇ ವಾಗ್ವಾದಗಳೂ ನಡೆಯುತ್ತಿದ್ದು, ನಿಯಮ ಉಲ್ಲಂಘಿಸುವವರ ಆಟೊ ಹಾಗೂ ಕ್ಯಾಬ್ಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ.</p>.<p>‘ವಿಮಾನ ಹಾಗೂ ರೈಲು ಪ್ರಯಾಣಿಕರಿಗೆ ಆಟೊ–ಕ್ಯಾಬ್ ಬಳಸಲು ಅನುಮತಿ ಇದೆ. ಅಷ್ಟಾದರೂ ಪೊಲೀಸರು ನಮ್ಮನ್ನು ತಡೆದು ದಂಡ ಹಾಕುತ್ತಿದ್ದಾರೆ’ ಎಂದು ಚಾಲಕರು ದೂರುತ್ತಿದ್ದಾರೆ.</p>.<p>ಪೊಲೀಸರು, ‘ಅನುಮತಿಯನ್ನೂ ದುರುಪಯೋಗಪಡಿಸಿಕೊಂಡು ಆಟೊ ಹಾಗೂ ಕ್ಯಾಬ್ಗಳನ್ನು ಓಡಿಸಲಾಗುತ್ತಿದೆ. ಸೂಕ್ತ ದಾಖಲೆ ಇಲ್ಲದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p><strong>ಕೆ.ಆರ್. ಮಾರುಕಟ್ಟೆಯಲ್ಲಿ ಡಿಸಿಪಿ ಸಂಚಾರ</strong><br />ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಬೆಳಿಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಈ ಸ್ಥಳದಲ್ಲಿ ನಿಯಮ ಉಲ್ಲಂಘನೆ ಹೆಚ್ಚಿದ್ದು, ಇದೇ ಕಾರಣಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಶನಿವಾರ ಮಾರುಕಟ್ಟೆ ಸುತ್ತಿದರು.</p>.<p>ಎಸಿಪಿ ಹಾಗೂ ಇನ್ಸ್ಪೆಕ್ಟರ್ ಜೊತೆ ಮಾರುಕಟ್ಟೆಯಲ್ಲಿ ಸಂಚರಿಸಿದ ಡಿಸಿಪಿ, ಕರ್ಫ್ಯೂ ನಿಯಮಗಳನ್ನು ಪಾಲಿಸುವಂತೆ ವ್ಯಾಪಾರಿಗಳು ಹಾಗೂ ಜನರಿಗೆ ಸೂಚಿಸಿದರು. ಮಾಸ್ಕ್ ಧರಿಸದ ಹಾಗೂ ಅಂತರ ಕಾಯ್ದುಕೊಳ್ಳದವರವನ್ನು ತರಾಟೆಗೆ ತೆಗೆದುಕೊಂಡರು. ಡಿಸಿಪಿ ಭೇಟಿಯಿಂದಾಗಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಪರಸ್ಪರ ಅಂತರ ಕಾಯ್ದುಕೊಂಡಿದ್ದು ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ಅಗತ್ಯ ಸೇವೆಗಳ ನೆಪದಲ್ಲಿ ಜನರ ಓಡಾಟ ಮುಂದುವರಿದಿದ್ದು, ಒಂದೇ ದಿನದಲ್ಲಿ ಇಂಥವರ 1,640 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>‘ಶುಕ್ರವಾರ ಬೆಳಿಗ್ಗೆಯಿಂದ ಶನಿವಾರ ಬೆಳಿಗ್ಗೆವರೆಗೆ ನಗರದೆಲ್ಲೆಡೆ ಬಿಗಿ ಭದ್ರತೆ ಇತ್ತು. ಈ ಸಂದರ್ಭದಲ್ಲಿ 1,479 ದ್ವಿಚಕ್ರ ವಾಹನ, 91 ಆಟೊ ಹಾಗೂ 70 ಕಾರುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಜಪ್ತಿ ಮಾಡಲಾದ ವಾಹನಗಳನ್ನು ನಿಗದಿತ ಸ್ಥಳಗಳಲ್ಲಿ ನಿಲ್ಲಿಸಲಾಗಿದೆ. ಮಾಲೀಕರು ನ್ಯಾಯಾಲಯದ ಮೂಲಕ ವಾಹನಗಳನ್ನು ಬಿಡಿಸಿಕೊಳ್ಳಬೇಕಾಗುತ್ತದೆ’ ಎಂದೂ ತಿಳಿಸಿದರು.</p>.<p><strong>ರೈಲು ನಿಲ್ದಾಣ ಭರ್ತಿ:</strong> ನಗರದ ಮೆಜೆಸ್ಟಿಕ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಯಶವಂತಪುರ ರೈಲು ನಿಲ್ದಾಣಗಳಲ್ಲಿ ಶನಿವಾರ ಜನಸಂದಣಿ ಇತ್ತು. ನಿಲ್ದಾಣದ ಹೊರ ಭಾಗ ಹಾಗೂ ಒಳಭಾಗ ಪ್ರಯಾಣಿಕರಿಂದ ಭರ್ತಿ ಆಗಿತ್ತು.</p>.<p>ಹೊರ ಜಿಲ್ಲೆ ಹಾಗೂ ಹೊರ ರಾಜ್ಯಕ್ಕೆ ಹೊರಟಿದ್ದ ಜನ, ಬೆಳಿಗ್ಗೆಯೇ ನಿಲ್ದಾಣಕ್ಕೆ ಬಂದಿದ್ದರು. ಊಟ, ಆಹಾರ ಹಾಗೂ ನೀರಿಗಾಗಿ ಪ್ರಯಾಣಿಕರು ಪರದಾಡಿದರು.</p>.<p>‘ರಾತ್ರಿ ರೈಲಿನಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸಲಾಗಿದೆ. ಬೆಳಿಗ್ಗೆ 10ರ ನಂತರ ಪೊಲೀಸರು ರಸ್ತೆಯಲ್ಲಿ ಓಡಾಡಲು ಬಿಡುವುದಿಲ್ಲ. ಆಟೊ ಹಾಗೂ ಕ್ಯಾಬ್ಗಳು ಸಿಗುವುದಿಲ್ಲ. ಹೀಗಾಗಿ, ಬೆಳಿಗ್ಗೆ 10 ಗಂಟೆ ಒಳಗೆಯೇ ನಿಲ್ದಾಣಕ್ಕೆ ಬಂದಿದ್ದೇವೆ’ ಎಂದು ಉತ್ತರ ಪ್ರದೇಶದ ಕಾರ್ಮಿಕ ಬಿಜು ಹೇಳಿದರು.</p>.<p>‘ಸ್ನೇಹಿತರೆಲ್ಲರೂ ಸೇರಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದೆವು. ಕರ್ಫ್ಯೂನಿಂದಾಗಿ ಕೆಲಸ ಹೋಗಿದ್ದು, ಹೀಗಾಗಿ ವಾಪಸು ಹೊರಟಿದ್ದೇವೆ. ಕರ್ಫ್ಯೂ ತೆರುವಾದ ನಂತರ ಪುನಃ ಬೆಂಗಳೂರಿಗೆ ಬರುತ್ತೇವೆ’ ಎಂದೂ ತಿಳಿಸಿದರು.</p>.<p><strong>ಉದ್ಯಾನದ ಎದುರೇ ಮಾರುಕಟ್ಟೆ:</strong> ಬಸವನಗುಡಿ, ರಾಜಾಜಿನಗರ, ವಿಜಯನಗರ ಹಾಗೂ ಹಲವೆಡೆ ಮಾರುಕಟ್ಟೆಗಳನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂದ್ ಮಾಡಿಸಿದ್ದಾರೆ. ಹೀಗಾಗಿ, ಅದೇ ಪ್ರದೇಶಗಳ ಉದ್ಯಾನ ಎದುರೇ ವ್ಯಾಪಾರಿಗಳು ತರಕಾರಿ ಸೇರಿ ಅಗತ್ಯ ವಸ್ತುಗಳನ್ನು ಮಾರುತ್ತಿದ್ದಾರೆ.</p>.<p>ಜನರು ತಂಡೋಪತಂಡವಾಗಿ ಉದ್ಯಾನ ಬಳಿ ಬಂದು ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದು, ಪರಸ್ಪರ ಅಂತರವನ್ನೂ ಕಲ್ಪಿಸುತ್ತಿಲ್ಲ. ಇದು ಸೋಂಕು ಹರಡಲು ದಾರಿ ಮಾಡಿಕೊಡುತ್ತಿದೆ.</p>.<p><strong>ಕ್ಯಾಬ್, ಆಟೊ ಓಡಾಟ:</strong> ಗೂಡ್ಸ್ ಹಾಗೂ ತುರ್ತು ಸೇವೆಗಳ ವಾಹನಗಳನ್ನು ಹೊರತುಪಡಿಸಿ ಎಲ್ಲ ಬಗೆಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆದರೆ, ಆಟೊ ಹಾಗೂ ಕ್ಯಾಬ್ಗಳು ನಗರದಲ್ಲಿ ನಿರಂತರವಾಗಿ ಸಂಚರಿಸುತ್ತಿವೆ.</p>.<p>ನಗರದ ಪ್ರತಿಯೊಂದು ರಸ್ತೆಯನ್ನೂ ಪೊಲೀಸರು ಬ್ಯಾರಿಕೇಡ್ ಹಾಕಿ ಕಾವಲು ಕಾಯುತ್ತಿದ್ದಾರೆ. ಆಟೊ ಹಾಗೂ ಕ್ಯಾಬ್ಗಳನ್ನು ತಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇಂಥ ಸಂದರ್ಭದಲ್ಲೇ ವಾಗ್ವಾದಗಳೂ ನಡೆಯುತ್ತಿದ್ದು, ನಿಯಮ ಉಲ್ಲಂಘಿಸುವವರ ಆಟೊ ಹಾಗೂ ಕ್ಯಾಬ್ಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ.</p>.<p>‘ವಿಮಾನ ಹಾಗೂ ರೈಲು ಪ್ರಯಾಣಿಕರಿಗೆ ಆಟೊ–ಕ್ಯಾಬ್ ಬಳಸಲು ಅನುಮತಿ ಇದೆ. ಅಷ್ಟಾದರೂ ಪೊಲೀಸರು ನಮ್ಮನ್ನು ತಡೆದು ದಂಡ ಹಾಕುತ್ತಿದ್ದಾರೆ’ ಎಂದು ಚಾಲಕರು ದೂರುತ್ತಿದ್ದಾರೆ.</p>.<p>ಪೊಲೀಸರು, ‘ಅನುಮತಿಯನ್ನೂ ದುರುಪಯೋಗಪಡಿಸಿಕೊಂಡು ಆಟೊ ಹಾಗೂ ಕ್ಯಾಬ್ಗಳನ್ನು ಓಡಿಸಲಾಗುತ್ತಿದೆ. ಸೂಕ್ತ ದಾಖಲೆ ಇಲ್ಲದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p><strong>ಕೆ.ಆರ್. ಮಾರುಕಟ್ಟೆಯಲ್ಲಿ ಡಿಸಿಪಿ ಸಂಚಾರ</strong><br />ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಬೆಳಿಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಈ ಸ್ಥಳದಲ್ಲಿ ನಿಯಮ ಉಲ್ಲಂಘನೆ ಹೆಚ್ಚಿದ್ದು, ಇದೇ ಕಾರಣಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಶನಿವಾರ ಮಾರುಕಟ್ಟೆ ಸುತ್ತಿದರು.</p>.<p>ಎಸಿಪಿ ಹಾಗೂ ಇನ್ಸ್ಪೆಕ್ಟರ್ ಜೊತೆ ಮಾರುಕಟ್ಟೆಯಲ್ಲಿ ಸಂಚರಿಸಿದ ಡಿಸಿಪಿ, ಕರ್ಫ್ಯೂ ನಿಯಮಗಳನ್ನು ಪಾಲಿಸುವಂತೆ ವ್ಯಾಪಾರಿಗಳು ಹಾಗೂ ಜನರಿಗೆ ಸೂಚಿಸಿದರು. ಮಾಸ್ಕ್ ಧರಿಸದ ಹಾಗೂ ಅಂತರ ಕಾಯ್ದುಕೊಳ್ಳದವರವನ್ನು ತರಾಟೆಗೆ ತೆಗೆದುಕೊಂಡರು. ಡಿಸಿಪಿ ಭೇಟಿಯಿಂದಾಗಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಪರಸ್ಪರ ಅಂತರ ಕಾಯ್ದುಕೊಂಡಿದ್ದು ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>