ವಿಧಾನಸೌಧದಲ್ಲಿ ಬುಧವಾರ ಜಾನಪದ ಲೋಕ ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ‘ಕರ್ನಾಟಕ ದರ್ಶನ ಯೋಜನೆಯಲ್ಲಿ ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ಮಾತ್ರ ಉಚಿತವಾಗಿ ಶೈಕ್ಷಣಿಕ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಇದರಿಂದ ಮಕ್ಕಳ ಮನಸ್ಸಿನಲ್ಲಿ ಜಾತಿ ವಿಷ ಬೀಜ ಬಿತ್ತಿದಂತೆ ಆಗುತ್ತಿದೆ. ಹಾಗಾಗಿ ಎಲ್ಲ ಸಮುದಾಯದ ಮಕ್ಕಳಿಗೂ ವಿಸ್ತರಿಸುವಂತೆ ಕೋರಿದ್ದು, ಬಜೆಟ್ನಲ್ಲಿ ಅವಕಾಶ ಸಿಗಬಹುದು’ ಎಂದರು.