<p><strong>ಬೆಂಗಳೂರು:</strong> ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಲು ಭಾನುವಾರ ಕಾಲ್ನಡಿಗೆ ಜಾಥಾ ನಡೆಯಿತು.</p>.<p>ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾತನಾಡಿ, ‘ಬೆಂಗಳೂರು ನಗರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದೆ. ಎಲ್ಲರೂ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತ ಚಲಾಯಿಸಬೇಕು. ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಬಂದೋಬಸ್ತು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಸ್ನೇಹಲ್ ಮಾತನಾಡಿ, ‘ಚುನಾವಣೆ, ದೇಶದ ಮುಂದಿನ ಐದು ವರ್ಷದ ಭವಿಷ್ಯವನ್ನು ರೂಪಿಸುವ ಕಾರ್ಯ’ ಎಂದು ಹೇಳಿದರು.</p>.<p>ಜಾಥಾ ಕಬ್ಬನ್ ಪಾರ್ಕ್ ಮುಖ್ಯದ್ವಾರದಿಂದ ಆರಂಭವಾಗಿ ಕಸ್ತೂರಬಾ ರಸ್ತೆ, ಕಂಠೀರವ ಒಳಾಂಗಣ ರಸ್ತೆ, ರಾಜಾರಾಂ ಮೋಹನ್ ರಾಯ್ ರಸ್ತೆ ಮೂಲಕ ಸಾಗಿ ಬಿಬಿಎಂಪಿ ಸಹಕಾರ ಸಂಘದ ಬಳಿ ಮುಕ್ತಾಯವಾಯಿತು.</p>.<p>ಬೆಂಗಳೂರು ಕೇಂದ್ರ ಚುನಾವಣಾಧಿಕಾರಿ ಡಾ.ಹರೀಶ್ ಕೆ., ಸಂಘದ ಅಧ್ಯಕ್ಷ ಎ.ಅಮೃತ್ ರಾಜ್, ಪದಾಧಿಕಾರಿಗಳಾದ ಸಾಯಿಶಂಕರ್, ಎ.ಜಿ. ಬಾಬಣ್ಣ, ಮಂಜುನಾಥ್, ಎಚ್.ಬಿ. ಹರೀಶ್ ಕೆ. ನರಸಿಂಹ, ರೇಣುಕಾಂಬ, ಕೆ. ಮಂಜೇಗೌಡ, ಡಾ.ಶೋಭಾ, ಮಂಜುನಾಥ್, ಸಂತೋಷ್ ಕುಮಾರ್ ನಾಯ್ಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಲು ಭಾನುವಾರ ಕಾಲ್ನಡಿಗೆ ಜಾಥಾ ನಡೆಯಿತು.</p>.<p>ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾತನಾಡಿ, ‘ಬೆಂಗಳೂರು ನಗರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದೆ. ಎಲ್ಲರೂ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತ ಚಲಾಯಿಸಬೇಕು. ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಬಂದೋಬಸ್ತು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಸ್ನೇಹಲ್ ಮಾತನಾಡಿ, ‘ಚುನಾವಣೆ, ದೇಶದ ಮುಂದಿನ ಐದು ವರ್ಷದ ಭವಿಷ್ಯವನ್ನು ರೂಪಿಸುವ ಕಾರ್ಯ’ ಎಂದು ಹೇಳಿದರು.</p>.<p>ಜಾಥಾ ಕಬ್ಬನ್ ಪಾರ್ಕ್ ಮುಖ್ಯದ್ವಾರದಿಂದ ಆರಂಭವಾಗಿ ಕಸ್ತೂರಬಾ ರಸ್ತೆ, ಕಂಠೀರವ ಒಳಾಂಗಣ ರಸ್ತೆ, ರಾಜಾರಾಂ ಮೋಹನ್ ರಾಯ್ ರಸ್ತೆ ಮೂಲಕ ಸಾಗಿ ಬಿಬಿಎಂಪಿ ಸಹಕಾರ ಸಂಘದ ಬಳಿ ಮುಕ್ತಾಯವಾಯಿತು.</p>.<p>ಬೆಂಗಳೂರು ಕೇಂದ್ರ ಚುನಾವಣಾಧಿಕಾರಿ ಡಾ.ಹರೀಶ್ ಕೆ., ಸಂಘದ ಅಧ್ಯಕ್ಷ ಎ.ಅಮೃತ್ ರಾಜ್, ಪದಾಧಿಕಾರಿಗಳಾದ ಸಾಯಿಶಂಕರ್, ಎ.ಜಿ. ಬಾಬಣ್ಣ, ಮಂಜುನಾಥ್, ಎಚ್.ಬಿ. ಹರೀಶ್ ಕೆ. ನರಸಿಂಹ, ರೇಣುಕಾಂಬ, ಕೆ. ಮಂಜೇಗೌಡ, ಡಾ.ಶೋಭಾ, ಮಂಜುನಾಥ್, ಸಂತೋಷ್ ಕುಮಾರ್ ನಾಯ್ಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>