‘ಹವಾಮಾನ ಬದಲಾವಣೆ ಮತ್ತು ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಮತ್ತೆಂದೂ ಸರಿಪಡಿಸಲು ಸಾಧ್ಯವಾಗದಂತಹ ಪರಿಸರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈಗಾಗಲೇ ಅತಿವೃಷ್ಟಿ, ಅನಾವೃಷ್ಟಿ, ನೀರಿನ ಅಭಾವ, ಬಿಸಿ ಗಾಳಿ, ಪ್ರವಾಹ, ಬರಗಾಲ, ಹಿಮಗಡ್ಡೆ ಕರಗುವಿಕೆ ಇತ್ಯಾದಿ ಸಮಸ್ಯೆಗಳಿಗೆ ನಾವು ಸಿಲುಕಿದ್ದೇವೆ. ಹಾಗಾಗಿ, ಸದ್ಯ ನಮ್ಮ ದೇಶದ ಚುನಾವಣೆಯಲ್ಲಿ ಭಾಗವಹಿಸುವ ಎಲ್ಲ ಪಕ್ಷಗಳು, ಪಕ್ಷ ಬೇಧ ಮರೆತು ತಮ್ಮ ಪ್ರಣಾಳಿಕೆಗಳಲ್ಲಿ ಪರಿಸರ ತುರ್ತು ಎದುರಿಸುವ ವಿಚಾರಗಳನ್ನು ಆದ್ಯತೆಯ ಮೇರೆಗೆ ಸೇರಿಸಿಕೊಳ್ಳಬೇಕು’ ಎಂದರು.