ಒಂದು ಮತಕ್ಕೆ ಬದಲಾವಣೆಯ ಶಕ್ತಿ: ರಮೇಶ್ ಚಿತ್ರನಟ
ರಮೇಶ್ ಅರವಿಂದ್ ಮಾತನಾಡಿ ‘ಏಪ್ರಿಲ್ 26ರಂದು ಚುನಾವಣಾ ಹಬ್ಬ. ಎಲ್ಲರೂ ಸಡಗರದಿಂದ ಮತಗಟ್ಟೆಗೆ ತೆರಳಿ ಮತದಾನ ಮಾಡೋಣ. ಒಂದು ಮತಕ್ಕೆ ಎಲ್ಲವನ್ನೂ ಬದಲಿಸುವ ಶಕ್ತಿಯಿದೆ. ಆದ್ದರಿಂದ ಎಲ್ಲರೂ ತಪ್ಪದೆ ಮತದಾನ ಮಾಡಬೇಕು’ ಎಂದು ತಿಳಿಸಿದರು. ‘ಚುನಾವಣಾ ವ್ಯವಸ್ಥೆಯಲ್ಲಿ ನಾವು ಮತದಾನ ಮಾಡಿದರೆ ಏನೂ ಬದಲಾಗುವುದಿಲ್ಲ ಎಂಬ ಮನೋಭಾವಿದ್ದರೆ ಅದನ್ನು ಮೊದಲು ತಲೆಯಿಂದ ತೆಗೆಯಿರಿ. ಜವಾಬ್ದಾರಿಯಿಂದ ಎಲ್ಲರೂ ಒಂದಾಗಿ ಮತದಾನ ಮಾಡಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಉತ್ತಮ ಸಮಾಜವನ್ನು ರೂಪಿಸಿ’ ಎಂದು ಪ್ರೇರೇಪಿಸಿದರು.