ಸೌಹಾರ್ದ ಕರ್ನಾಟಕ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಜಿ.ರಾಮಕೃಷ್ಣ, ಕೆ. ಮರುಳಸಿದ್ದಪ್ಪ, ದೇವನೂರ ಮಹಾದೇವ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸೇರಿದಂತೆ ಹಲವು ಬರಹಗಾರರು, ಹೋರಾಟಗಾರರು, ದಲಿತ, ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳ ಮುಖಂಡರು ಜಂಟಿ ಸಹಿಯೊಂದಿಗೆ ಭಾನುವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.