ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸಂಚಾಲಕ ಇಂದೂಧರ ಹೊನ್ನಾಪುರ, ‘ಅವಕಾಶವಾದಿ ರಾಜಕಾರಣಿಗಳು, ಲೂಟಿಕೋರ ಉದ್ಯಮಿಗಳು ಮತ್ತು ಸನಾತನ ಪುರೋಹಿತ ಶಾಹಿಗಳ ದುಷ್ಟಕೂಟ ಸೇರಿಕೊಂಡು ದೇಶದ ಸಾರ್ವಭೌಮತೆ, ಘನತೆ, ನೆಮ್ಮದಿಯನ್ನು ಬೀದಿ ಪಾಲು ಮಾಡುವುದರಲ್ಲಿ ತೊಡಗಿಸಿಕೊಂಡಿದೆ. ಸಂವಿಧಾನದ ಹೆಸರಿನಲ್ಲಿ ಅಧಿಕಾರ ಹಿಡಿದವರು, ಇಂದು ಸಂವಿಧಾನವನ್ನೇ ನಾಶ ಮಾಡಲು ಟೊಂಕ ಕಟ್ಟಿ ನಿಂತಿದ್ದಾರೆ. ಆದ್ದರಿಂದ, ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಈ ಲೋಕಸಭಾ ಚುನಾವಣೆಯಲ್ಲಿ ಅವಕಾಶವಿದೆ. ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ತಿಳಿಸಿದರು.