<p>ಬೆಂಗಳೂರು: ದೊಡ್ಡ ಅಪಾರ್ಟ್ಮೆಂಟ್ ಗಳು ಹಾಗೂ ಹೆಚ್ಚು ಮತದಾರರಿರುವ ವಸತಿ ಸಮುಚ್ಚಯಗಳಲ್ಲಿರುವ ಸಂಘಗಳ ಸದಸ್ಯರು ಮತದಾನದ ಪ್ರಮಾಣ ಹೆಚ್ಚಾಗಲು ಎಲ್ಲರಲ್ಲೂ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.</p><p>ಲೋಕಸಭಾ ಚುನಾವಣೆಗೆ<br>ಸಂಬಂಧಿಸಿದಂತೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿ<br>ಗಳೊಂದಿಗೆ ಸೋಮವಾರ ವಿಡಿಯೊ ಸಂವಾದ ನಡೆಸಿದರು.</p><p>‘ಚುನಾವಣೆಯ ಸಂಪೂರ್ಣ ಮಾಹಿತಿಯನ್ನು ಚುನಾವಣಾ ವಿಭಾಗ ದಿಂದ ನೀಡಲಾಗುವುದು. ಆ ಮಾಹಿತಿ ಯನ್ನು ತಮ್ಮ ಸಮುಚ್ಚಯಗಳಲ್ಲಿ ಬಿತ್ತ ರಿಸಿಕೊಂಡು ಮತದಾನದ ಕುರಿತು ಅರಿವು ಮೂಡಿಸಬೇಕು. ಜೊತೆಗೆ ತಪ್ಪದೆ ಮತದಾನ ಮಾಡುವಂತೆ ಎಲ್ಲರಿಗೂ ಪ್ರೇರೇಪಿಸಬೇಕು’ ಎಂದು ತಿಳಿಸಿದರು.</p><p>‘ಬಿಬಿಎಂಪಿ ವ್ಯಾಪ್ತಿಯ 28 ವಿಧಾನ ಸಭೆ ಕ್ಷೇತ್ರಗಳು ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಬರಲಿದ್ದು, ಮತದಾನದ ಪ್ರಮಾಣವನ್ನು ಕಳೆದ ಬಾರಿಗಿಂತ ಹೆಚ್ಚಳ ಮಾಡಬೇಕಿದೆ. ಅದಕ್ಕೆ ತಮ್ಮ ಸಹಕಾರ ಅತ್ಯಗತ್ಯವಿದೆ’ ಎಂದು ಹೇಳಿದರು.</p><p>‘85 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರಿಗೆ ಅಂಚೆ ಮತದಾನ ಮಾಡುವ ಅವಕಾಶವಿದ್ದು, ಆ ಕುರಿತು ಮಾಹಿತಿ ನೀಡಿ ಬೂತ್ ಮಟ್ಟದ ಅಧಿಕಾರಿಗಳಿಂದ 12ಡಿ ನಮೂನೆ ಗಳನ್ನು ಭರ್ತಿ ಮಾಡಿಸಬೇಕು’ ಎಂದು ಹೇಳಿದರು.</p><p>ಮತಗಟ್ಟೆಗಳ ಬಳಿ ಶೌಚಾಲಯ, ಕುಡಿಯುವ ನೀರು, ಕುರ್ಚಿಗಳು, ಫ್ಯಾನ್, ವಿದ್ಯುತ್ ವ್ಯವಸ್ಥೆ, ಅಂಗವಿಕಲರಿಗೆ ರ್ಯಾಂಪ್ ವ್ಯವಸ್ಥೆ ಸೇರಿದಂತೆ ಇನ್ನಿತರೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗು<br>ವುದು ಎಂದರು.</p><p>ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಕಾಂತರಾಜು, ಬೆಂಗಳೂರು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ನಿವಾಸಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ದೊಡ್ಡ ಅಪಾರ್ಟ್ಮೆಂಟ್ ಗಳು ಹಾಗೂ ಹೆಚ್ಚು ಮತದಾರರಿರುವ ವಸತಿ ಸಮುಚ್ಚಯಗಳಲ್ಲಿರುವ ಸಂಘಗಳ ಸದಸ್ಯರು ಮತದಾನದ ಪ್ರಮಾಣ ಹೆಚ್ಚಾಗಲು ಎಲ್ಲರಲ್ಲೂ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.</p><p>ಲೋಕಸಭಾ ಚುನಾವಣೆಗೆ<br>ಸಂಬಂಧಿಸಿದಂತೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿ<br>ಗಳೊಂದಿಗೆ ಸೋಮವಾರ ವಿಡಿಯೊ ಸಂವಾದ ನಡೆಸಿದರು.</p><p>‘ಚುನಾವಣೆಯ ಸಂಪೂರ್ಣ ಮಾಹಿತಿಯನ್ನು ಚುನಾವಣಾ ವಿಭಾಗ ದಿಂದ ನೀಡಲಾಗುವುದು. ಆ ಮಾಹಿತಿ ಯನ್ನು ತಮ್ಮ ಸಮುಚ್ಚಯಗಳಲ್ಲಿ ಬಿತ್ತ ರಿಸಿಕೊಂಡು ಮತದಾನದ ಕುರಿತು ಅರಿವು ಮೂಡಿಸಬೇಕು. ಜೊತೆಗೆ ತಪ್ಪದೆ ಮತದಾನ ಮಾಡುವಂತೆ ಎಲ್ಲರಿಗೂ ಪ್ರೇರೇಪಿಸಬೇಕು’ ಎಂದು ತಿಳಿಸಿದರು.</p><p>‘ಬಿಬಿಎಂಪಿ ವ್ಯಾಪ್ತಿಯ 28 ವಿಧಾನ ಸಭೆ ಕ್ಷೇತ್ರಗಳು ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಬರಲಿದ್ದು, ಮತದಾನದ ಪ್ರಮಾಣವನ್ನು ಕಳೆದ ಬಾರಿಗಿಂತ ಹೆಚ್ಚಳ ಮಾಡಬೇಕಿದೆ. ಅದಕ್ಕೆ ತಮ್ಮ ಸಹಕಾರ ಅತ್ಯಗತ್ಯವಿದೆ’ ಎಂದು ಹೇಳಿದರು.</p><p>‘85 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರಿಗೆ ಅಂಚೆ ಮತದಾನ ಮಾಡುವ ಅವಕಾಶವಿದ್ದು, ಆ ಕುರಿತು ಮಾಹಿತಿ ನೀಡಿ ಬೂತ್ ಮಟ್ಟದ ಅಧಿಕಾರಿಗಳಿಂದ 12ಡಿ ನಮೂನೆ ಗಳನ್ನು ಭರ್ತಿ ಮಾಡಿಸಬೇಕು’ ಎಂದು ಹೇಳಿದರು.</p><p>ಮತಗಟ್ಟೆಗಳ ಬಳಿ ಶೌಚಾಲಯ, ಕುಡಿಯುವ ನೀರು, ಕುರ್ಚಿಗಳು, ಫ್ಯಾನ್, ವಿದ್ಯುತ್ ವ್ಯವಸ್ಥೆ, ಅಂಗವಿಕಲರಿಗೆ ರ್ಯಾಂಪ್ ವ್ಯವಸ್ಥೆ ಸೇರಿದಂತೆ ಇನ್ನಿತರೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗು<br>ವುದು ಎಂದರು.</p><p>ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಕಾಂತರಾಜು, ಬೆಂಗಳೂರು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ನಿವಾಸಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>