<p><strong>ಬೆಂಗಳೂರು</strong>: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದು, ಪರವಾನಗಿ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಠಾಣೆಗಳಲ್ಲಿ ಠೇವಣಿ ಇರಿಸುವಂತೆ ಕಮಿಷನರ್ ಬಿ. ದಯಾನಂದ್ ಸೂಚಿಸಿದ್ದಾರೆ.</p>.<p>ಈ ಬಗ್ಗೆ ಪೊಲೀಸರಿಗೆ ನಿರ್ದೇಶನ ನೀಡಿರುವ ದಯಾನಂದ್, ‘ಶಸ್ತ್ರಾಸ್ತ್ರ ಪರವಾನಗಿ ಪಡೆದವರ ಪಟ್ಟಿ ಸಿದ್ಧಪಡಿಸಿ. ಅವರಿಂದ ಶಸ್ತ್ರಾಸ್ತ್ರಗಳನ್ನು ಠೇವಣಿ ಇರಿಸಿಕೊಂಡು, ರಶೀದಿ ನೀಡಬೇಕು. ನೀತಿ ಸಂಹಿತೆ ಮುಗಿಯುವವರೆಗೂ ಶಸ್ತ್ರಾಸ್ತ್ರ ವಾಪಸು ನೀಡಬಾರದು’ ಎಂದಿದ್ದಾರೆ.</p>.<p>‘ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು. ಶಸ್ತ್ರಾಸ್ತ್ರ ಠೇವಣಿ ಇರಿಸದವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದೂ ಅವರು ಹೇಳಿದ್ದಾರೆ.</p>.<p>100 ಚೆಕ್ಪೋಸ್ಟ್ ನಿರ್ಮಾಣ: ‘ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 100ಕ್ಕೂ ಹೆಚ್ಚು ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. ಈ ಚೆಕ್ಪೋಸ್ಟ್ಗಳಲ್ಲಿ ಪೊಲೀಸರು ಹಾಗೂ ಬೇರೆ ಇಲಾಖೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ’ ಎಂದು ದಯಾನಂದ್ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದರು.</p>.<p>‘ದಾಖಲೆ ಇಲ್ಲದೇ ನಗದು ಸಾಗಣೆ ಹಾಗೂ ಮತದಾರರಿಗೆ ಆಮಿಷವೊಡ್ಡಲು ವಸ್ತುಗಳ ಸಾಗಣೆ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ನಗರದ ಎಲ್ಲ ಕಡೆಯೂ ಬಿಗಿ ಭದ್ರತೆ ಇರಲಿದೆ’ ಎಂದು ಹೇಳಿದರು.</p>.<p><strong>₹ 13 ಲಕ್ಷ ಜಪ್ತಿ:</strong> ರೆಸಿಡೆನ್ಸಿ ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹13 ಲಕ್ಷವನ್ನು ಅಶೋಕನಗರ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>‘ಶನಿವಾರ ರಾತ್ರಿ ತಪಾಸಣೆ ಸಂದರ್ಭದಲ್ಲಿ, ವಾಹನವೊಂದರಲ್ಲಿ ₹ 13 ಲಕ್ಷ ಪತ್ತೆಯಾಗಿತ್ತು. ಈ ಹಣಕ್ಕೆ ಯಾವುದೇ ದಾಖಲೆ ಇರಲಿಲ್ಲ. ಹೀಗಾಗಿ, ಹಣವನ್ನು ಜಪ್ತಿ ಮಾಡಿ ವಾಹನದ ಚಾಲಕನಿಗೆ ನೋಟಿಸ್ ನೀಡಲಾಗಿದೆ. ದಾಖಲೆ ತಂದುಕೊಡುವುದಾಗಿ ಚಾಲಕ ತಿಳಿಸಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದು, ಪರವಾನಗಿ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಠಾಣೆಗಳಲ್ಲಿ ಠೇವಣಿ ಇರಿಸುವಂತೆ ಕಮಿಷನರ್ ಬಿ. ದಯಾನಂದ್ ಸೂಚಿಸಿದ್ದಾರೆ.</p>.<p>ಈ ಬಗ್ಗೆ ಪೊಲೀಸರಿಗೆ ನಿರ್ದೇಶನ ನೀಡಿರುವ ದಯಾನಂದ್, ‘ಶಸ್ತ್ರಾಸ್ತ್ರ ಪರವಾನಗಿ ಪಡೆದವರ ಪಟ್ಟಿ ಸಿದ್ಧಪಡಿಸಿ. ಅವರಿಂದ ಶಸ್ತ್ರಾಸ್ತ್ರಗಳನ್ನು ಠೇವಣಿ ಇರಿಸಿಕೊಂಡು, ರಶೀದಿ ನೀಡಬೇಕು. ನೀತಿ ಸಂಹಿತೆ ಮುಗಿಯುವವರೆಗೂ ಶಸ್ತ್ರಾಸ್ತ್ರ ವಾಪಸು ನೀಡಬಾರದು’ ಎಂದಿದ್ದಾರೆ.</p>.<p>‘ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು. ಶಸ್ತ್ರಾಸ್ತ್ರ ಠೇವಣಿ ಇರಿಸದವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದೂ ಅವರು ಹೇಳಿದ್ದಾರೆ.</p>.<p>100 ಚೆಕ್ಪೋಸ್ಟ್ ನಿರ್ಮಾಣ: ‘ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 100ಕ್ಕೂ ಹೆಚ್ಚು ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. ಈ ಚೆಕ್ಪೋಸ್ಟ್ಗಳಲ್ಲಿ ಪೊಲೀಸರು ಹಾಗೂ ಬೇರೆ ಇಲಾಖೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ’ ಎಂದು ದಯಾನಂದ್ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದರು.</p>.<p>‘ದಾಖಲೆ ಇಲ್ಲದೇ ನಗದು ಸಾಗಣೆ ಹಾಗೂ ಮತದಾರರಿಗೆ ಆಮಿಷವೊಡ್ಡಲು ವಸ್ತುಗಳ ಸಾಗಣೆ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ನಗರದ ಎಲ್ಲ ಕಡೆಯೂ ಬಿಗಿ ಭದ್ರತೆ ಇರಲಿದೆ’ ಎಂದು ಹೇಳಿದರು.</p>.<p><strong>₹ 13 ಲಕ್ಷ ಜಪ್ತಿ:</strong> ರೆಸಿಡೆನ್ಸಿ ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹13 ಲಕ್ಷವನ್ನು ಅಶೋಕನಗರ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>‘ಶನಿವಾರ ರಾತ್ರಿ ತಪಾಸಣೆ ಸಂದರ್ಭದಲ್ಲಿ, ವಾಹನವೊಂದರಲ್ಲಿ ₹ 13 ಲಕ್ಷ ಪತ್ತೆಯಾಗಿತ್ತು. ಈ ಹಣಕ್ಕೆ ಯಾವುದೇ ದಾಖಲೆ ಇರಲಿಲ್ಲ. ಹೀಗಾಗಿ, ಹಣವನ್ನು ಜಪ್ತಿ ಮಾಡಿ ವಾಹನದ ಚಾಲಕನಿಗೆ ನೋಟಿಸ್ ನೀಡಲಾಗಿದೆ. ದಾಖಲೆ ತಂದುಕೊಡುವುದಾಗಿ ಚಾಲಕ ತಿಳಿಸಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>