<p><strong>ಬೆಂಗಳೂರು:</strong> ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, ಲಗೇಜು ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಪೊಲೀಸರು ನಿಗಾ ವಹಿಸಿದ್ದಾರೆ. ವಿಶೇಷ ಭದ್ರತೆಗಾಗಿ ಪೊಲೀಸರ 20 ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.</p>.<p>ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಆಮಿಷವೊಡ್ಡಲು ಸಾಮಗ್ರಿಗಳನ್ನು ಸಾಗಿಸುವ ಕೆಲಸಗಳು ಅಲ್ಲಲ್ಲಿ ನಡೆಯುತ್ತಿದೆ. ರಾಜ್ಯದ ಎಲ್ಲ ರಸ್ತೆಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ಅಕ್ರಮ ಸಾಗಣೆಯನ್ನು ಬಹುಬೇಗನೇ ಪತ್ತೆ ಹಚ್ಚಲಾಗುತ್ತಿದೆ.</p>.<p>ಕೆಲವರು, ರೈಲುಗಳ ಮೂಲಕ ಸಾಮಗ್ರಿಗಳನ್ನು ಸಾಗಿಸುತ್ತಿರುವುದು ವರದಿಯಾಗಿದೆ. ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ 60ಕ್ಕೂ ಹೆಚ್ಚು ಕುಕ್ಕರ್ಗಳು ಪತ್ತೆಯಾಗಿವೆ. ಇದೇ ಕಾರಣಕ್ಕೆ ರಾಜ್ಯದ ಎಲ್ಲ ನಿಲ್ದಾಣಗಳಲ್ಲಿ ತಪಾಸಣೆ ಬಿಗಿಗೊಳಿಸುವಂತೆ ಚುನಾವಣಾ ಆಯೋಗ ರೈಲ್ವೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.</p>.<p>ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೇಂದ್ರ ನಿಲ್ದಾಣ, ಯಶವಂತಪುರ, ಕಂಟೋನ್ಮೆಂಟ್ ಹಾಗೂ ಇತರೆ ನಿಲ್ದಾಣಗಳಲ್ಲಿ ರೈಲ್ವೆ ರಕ್ಷಣಾ ಪಡೆ ಹಾಗೂ ಪೊಲೀಸರು ಭಾನುವಾರ ತಪಾಸಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, ಲಗೇಜು ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಪೊಲೀಸರು ನಿಗಾ ವಹಿಸಿದ್ದಾರೆ. ವಿಶೇಷ ಭದ್ರತೆಗಾಗಿ ಪೊಲೀಸರ 20 ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.</p>.<p>ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಆಮಿಷವೊಡ್ಡಲು ಸಾಮಗ್ರಿಗಳನ್ನು ಸಾಗಿಸುವ ಕೆಲಸಗಳು ಅಲ್ಲಲ್ಲಿ ನಡೆಯುತ್ತಿದೆ. ರಾಜ್ಯದ ಎಲ್ಲ ರಸ್ತೆಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ಅಕ್ರಮ ಸಾಗಣೆಯನ್ನು ಬಹುಬೇಗನೇ ಪತ್ತೆ ಹಚ್ಚಲಾಗುತ್ತಿದೆ.</p>.<p>ಕೆಲವರು, ರೈಲುಗಳ ಮೂಲಕ ಸಾಮಗ್ರಿಗಳನ್ನು ಸಾಗಿಸುತ್ತಿರುವುದು ವರದಿಯಾಗಿದೆ. ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ 60ಕ್ಕೂ ಹೆಚ್ಚು ಕುಕ್ಕರ್ಗಳು ಪತ್ತೆಯಾಗಿವೆ. ಇದೇ ಕಾರಣಕ್ಕೆ ರಾಜ್ಯದ ಎಲ್ಲ ನಿಲ್ದಾಣಗಳಲ್ಲಿ ತಪಾಸಣೆ ಬಿಗಿಗೊಳಿಸುವಂತೆ ಚುನಾವಣಾ ಆಯೋಗ ರೈಲ್ವೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.</p>.<p>ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೇಂದ್ರ ನಿಲ್ದಾಣ, ಯಶವಂತಪುರ, ಕಂಟೋನ್ಮೆಂಟ್ ಹಾಗೂ ಇತರೆ ನಿಲ್ದಾಣಗಳಲ್ಲಿ ರೈಲ್ವೆ ರಕ್ಷಣಾ ಪಡೆ ಹಾಗೂ ಪೊಲೀಸರು ಭಾನುವಾರ ತಪಾಸಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>