<p><strong>ಬೆಂಗಳೂರು:</strong> ‘ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಬೇಕು. ಮತದಾನ ನಮ್ಮ ಕರ್ತವ್ಯ, ನಮ್ಮ ಜವಾಬ್ದಾರಿ’ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.</p><p>ಲೋಕಸಭಾ ಚುನಾವಣೆಯ ಅಂಗವಾಗಿ ಚುನಾವಣಾ ಆಯೋಗ, ಬಿಬಿಎಂಪಿ ಹಾಗೂ ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ಮತದಾನದ ಜಾಗೃತಿಗಾಗಿ ವಿಧಾನಸೌಧದ ಮುಂಭಾಗ ಗುರುವಾರ ಹಮ್ಮಿಕೊಂಡಿದ್ದ ಸೈಕಲ್ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.</p><p>‘ಏಪ್ರಿಲ್ 26 ರಂದು ನಡೆಯುವ ಮತದಾನದ ಹಬ್ಬವನ್ನು ಎಲ್ಲರೂ ಸೇರಿ ಒಟ್ಟಾಗಿ ಆಚರಿಸೋಣ. ಮತ ಚಲಾಯಿಸಲು ಅರ್ಹರಿರುವ ಎಲ್ಲರೂ ತಪ್ಪದೆ ಮತ ಚಲಾಯಿಸೋಣ’ ಎಂದರು.</p><p>ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಹಾಗೂ ಜಾಥಾಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.</p><p>ವಿಧಾನಸೌಧದ ಮುಂಭಾಗದಿಂದ, ಕೆ.ಆರ್ ವೃತ್ತದ ನೃಪತುಂಗ ರಸ್ತೆಯ ಮೂಲಕ ಸಾಗಿದ ಸೈಕಲ್ ಜಾಥಾ ಹಡ್ಸನ್ ವೃತ್ತ, ಕಸ್ತೂರ್ ಬಾ ರಸ್ತೆ, ಕ್ವೀನ್ಸ್ ರಸ್ತೆಯಿಂದ (ಚಿನ್ನಸ್ವಾಮಿ ಕ್ರೀಡಾಂಗಣ) ಡಾ. ಬಿ.ಆರ್.ಅಂಬೇಡ್ಕರ್ ರಸ್ತೆಯ ಮೂಲಕ ವಿಧಾನಸೌಧ ಪೂರ್ವ ದ್ವಾರದ ಬಳಿ ಮುಕ್ತಾಯಗೊಂಡಿತು.</p><p>ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ಚುನಾವಣಾ ರಾಯಭಾರಿಗಳಾದ ಅನೂಪ್ ಶ್ರೀಧರ್, ನೀತು ವನಜಾಕ್ಷಿ, ಎನ್.ಎಸ್.ಎಸ್ ವಿದ್ಯಾರ್ಥಿಗಳು, ಸೈಕ್ಲಿಸ್ಟ್ಗಳು <br>ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಬೇಕು. ಮತದಾನ ನಮ್ಮ ಕರ್ತವ್ಯ, ನಮ್ಮ ಜವಾಬ್ದಾರಿ’ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.</p><p>ಲೋಕಸಭಾ ಚುನಾವಣೆಯ ಅಂಗವಾಗಿ ಚುನಾವಣಾ ಆಯೋಗ, ಬಿಬಿಎಂಪಿ ಹಾಗೂ ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ಮತದಾನದ ಜಾಗೃತಿಗಾಗಿ ವಿಧಾನಸೌಧದ ಮುಂಭಾಗ ಗುರುವಾರ ಹಮ್ಮಿಕೊಂಡಿದ್ದ ಸೈಕಲ್ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.</p><p>‘ಏಪ್ರಿಲ್ 26 ರಂದು ನಡೆಯುವ ಮತದಾನದ ಹಬ್ಬವನ್ನು ಎಲ್ಲರೂ ಸೇರಿ ಒಟ್ಟಾಗಿ ಆಚರಿಸೋಣ. ಮತ ಚಲಾಯಿಸಲು ಅರ್ಹರಿರುವ ಎಲ್ಲರೂ ತಪ್ಪದೆ ಮತ ಚಲಾಯಿಸೋಣ’ ಎಂದರು.</p><p>ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಹಾಗೂ ಜಾಥಾಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.</p><p>ವಿಧಾನಸೌಧದ ಮುಂಭಾಗದಿಂದ, ಕೆ.ಆರ್ ವೃತ್ತದ ನೃಪತುಂಗ ರಸ್ತೆಯ ಮೂಲಕ ಸಾಗಿದ ಸೈಕಲ್ ಜಾಥಾ ಹಡ್ಸನ್ ವೃತ್ತ, ಕಸ್ತೂರ್ ಬಾ ರಸ್ತೆ, ಕ್ವೀನ್ಸ್ ರಸ್ತೆಯಿಂದ (ಚಿನ್ನಸ್ವಾಮಿ ಕ್ರೀಡಾಂಗಣ) ಡಾ. ಬಿ.ಆರ್.ಅಂಬೇಡ್ಕರ್ ರಸ್ತೆಯ ಮೂಲಕ ವಿಧಾನಸೌಧ ಪೂರ್ವ ದ್ವಾರದ ಬಳಿ ಮುಕ್ತಾಯಗೊಂಡಿತು.</p><p>ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ಚುನಾವಣಾ ರಾಯಭಾರಿಗಳಾದ ಅನೂಪ್ ಶ್ರೀಧರ್, ನೀತು ವನಜಾಕ್ಷಿ, ಎನ್.ಎಸ್.ಎಸ್ ವಿದ್ಯಾರ್ಥಿಗಳು, ಸೈಕ್ಲಿಸ್ಟ್ಗಳು <br>ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>