‘ಬೆಂಗಳೂರು ಹೈಕೋರ್ಟ್ ಪ್ರಧಾನ ಪೀಠ, ಕಲಬುರ್ಗಿ ಹಾಗೂ ಧಾರವಾಡ ಪೀಠಗಳೂ ಸೇರಿದಂತೆ ಎಲ್ಲಾ ಜಿಲ್ಲೆ, ತಾಲ್ಲೂಕು ಕೇಂದ್ರಗಳಲ್ಲಿ ಅದಾಲತ್ ನಡೆಸಲಾಗಿದೆ. ಗಂಭೀರ ಪ್ರಕರಣಗಳನ್ನು ಹೊರತುಪಡಿಸಿ ರಾಜಿಯಾಗಬಹುದಾದ ವಾಹನ ಅಪಘಾತ ಪರಿಹಾರ, ಕೌಟುಂಬಿಕ, ಸಾಲ ವಸೂಲು, ಚೆಕ್ ಬೌನ್ಸ್ ಸೇರಿದಂತೆ ಎಲ್ಲ ರೀತಿಯ ವ್ಯಾಜ್ಯಗಳನ್ನು ಬಗೆಹರಿಸಲಾಗಿದೆ. ಈ ಪ್ರಕರಣಗಳಲ್ಲಿ ಒಟ್ಟು ₹ 327,04,74,069 ಮೌಲ್ಯ ಒಳಗೊಂಡಿದೆ’ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಂಚಾಟೆ ಸಂಜೀವಕುಮಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.